ಶಬರಿಮಲೆ ವಿವಾದದ ಕುರಿತ  ಪ್ರಶ್ನೆಗೆ ಉತ್ತರ ನೀಡುವ ವೇಳೆ ನಟ ಕಮಲ್ ಹಾಸನ್‌ಗೆ  ಕರ್ನಾಟಕವನ್ನ ಟೀಕಿಸಿದ್ದಾರೆ. ಕಾವೇರಿ ತೀರ್ಪು ವಿಚಾರವಾಗಿ ಕಮಲ್ ಮತ್ತೆ ಕಾವೇರಿ ವಿವಾದವನ್ನ ಎಳೆದುತಂದಿದ್ದಾರೆ.

ಶಬರಿಮಲೆ(ಅ.21): ‘ಶಬರಿಮಲೆ ವಿವಾದದಲ್ಲಿ ನಾನು ಪ್ರತಿಕ್ರಿಯಿಸಲ್ಲ’ ಎನ್ನುತ್ತಲೇ ಕರ್ನಾಟಕ ಸರ್ಕಾರವನ್ನು ಎಳೆದು ತಂದಿರುವ ನಟ ಕಮಲ್‌ ಹಾಸನ್‌, ಕಾವೇರಿ ವಿಷಯದಲ್ಲಿ ಕರ್ನಾಟಕವನ್ನು ಟೀಕಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ ಸುದ್ದಿಗಾರರು ‘ಕೇರಳ ಸರ್ಕಾರ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಪಾಲಿಸುತ್ತಿಲ್ಲವೇ’ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕಮಲ್‌, ‘ಕೇರಳ ಸರ್ಕಾರ ಸುಪ್ರೀಂ ಆದೇಶ ಗೌರವಿಸುತ್ತಿದೆ. ಆದರೆ ಕರ್ನಾಟಕದ ವಿಚಾರಕ್ಕೆ ಬಂದಾಗ ಕರ್ನಾಟಕ ಸರ್ಕಾರವೇ ಕಾವೇರಿ ವಿಷಯದಲ್ಲಿ ಕೋರ್ಟ್‌ ಆದೇಶ ಗೌರವಿಸುತ್ತಿಲ್ಲ. ಕೇರಳದ ವಿಚಾರದಲ್ಲಿ ಜನರು ಕೋರ್ಟ್‌ ಆದೇಶ ಗೌರವಿಸುತ್ತಿಲ್ಲ. ಎರಡಕ್ಕೂ ವ್ಯತ್ಯಾಸವಿದೆ’ ಎಂದರು.