ಬರೋಬ್ಬರಿ 3 ದಿನಗಳ ಕಾಲ ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಐಟಿ ಅಧಿಕಾರಿಗಳ ಶೋಧ ಕಾರ್ಯ ಅಂತ್ಯವಾಗಿದ್ದು, ಈ ಬಗ್ಗೆ ಯಶ್ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಹೀಗೆ.
ಬೆಂಗಳೂರು, [ಜ. 05]: ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ವಿಚಾರಕ್ಕೆ ನಮ್ಮ ಮನೆ ಮೇಲೆ ದಾಳಿ ನಡೆದಿದೆ ಅಂತೆಲ್ಲಾ ಊಹಾಪೋಹಾ ಹಬ್ಬಿಸಬಾರದು ಎಂದು ನಟ ಯಶ್ ಹೇಳಿದ್ದಾರೆ.
ಐಟಿ ದಾಳಿ ಕುರಿತಂತೆ ಬೆಂಗಳೂರಿನ ಹೊಸಕೆರೆಹಳ್ಳಿ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್, ದಾಳಿ ಸಂಬಂಧ ಕೇವಲ ಊಹಾಪೋಹಗಳ ಮಾತೇ ಕೇಳಿ ಬರುತ್ತಿವೆ ಎಂದು ಅಸಮಾಧಾನ ಹೊರಕಿದರು.
ಯಶ್ ಮನೆಯಲ್ಲಿ ಐಟಿ ಶೋಧ ಕಾರ್ಯ ಅಂತ್ಯ: ಸಿಕ್ಕಿದ್ದೇನು?
ಅಷ್ಟು ಸಿಕ್ತು ಇಷ್ಟು ಸಿಕ್ತು ಎಂದು ಊಹಾಪೋಹಗಳನ್ನ ಹಬ್ಬಿಸಲಾಗಿದೆ. ಬುಲ್ ಷಿಟ್ಗಳನ್ನ ತೋರಿಸ್ಬಾರ್ದು. ಎರಡು ದಿನ ನನ್ನ ಹೆಂಡತಿ ಹಾಗೂ ಮಗಳನ್ನ ಬಿಟ್ಟಿದ್ದದ್ದು ಕಷ್ಟವಾಗಿತ್ತು.
ಯಶ್ ಮನೆಯಲ್ಲಿಯೇ ಐಟಿ ಅಧಿಕಾರಿಗಳು : ಮುಂದೇನು..?
ಅಭಿಮಾನಿಗಳು ಹೊರಗೆ ಜಮಾಯಿಸಿದ್ದರು ಎಂದು ಕೇಳಿಪಟ್ಟೇ/ ಆದರೆ, ಅವರನ್ನು ಭೇಟಿ ಮಾಡಲು ಆಗಲಿಲ್ಲ. ಆ ಎಲ್ಲಾ ಅಭಿಮಾನಿಗಳಿಗೆ ನನ್ನ ಧನ್ಯವಾದಗಳು.
ಐಟಿ ಅಧಿಕಾರಿಗಳ ಎಲ್ಲಾ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಮುಂದೆ ಈ ವಿಚಾರಕ್ಕೆ ಕರೆದ್ರೆ ಖಂಡಿತ ಹೋಗುತ್ತೇನೆ ಎಂದರು.
ಇದೇ ವೇಳೆ, ಹೆಂಡತಿ ಮಗು ಜೊತೆ ಸ್ವಲ್ಪ ಸಮಯ ಕಳೆದು ಹುಬ್ಬಳ್ಳಿಯಲ್ಲಿ ನಡೆಯಲಿರುವ ನಟಸಾರ್ವಭೌಮ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇನೆ ಎಂದರು ಹೇಳಿದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 5, 2019, 4:55 PM IST