ಈ ಬಗ್ಗೆ ನಟಿಯ ಸಹೋದರ  ಮಾಧ್ಯಮಗಳಿಗೆ ಕರೆ ಮಾಡಿ ಇನ್ನು 2 ದಿನಗಳಲ್ಲಿ ಸ್ವತಃ ನಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದಿದ್ದಾರೆ

ಬೆಂಗಳೂರು(ನ.02): ಸ್ಯಾಂಡಲ್'ವುಡ್ ನಟಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೂರು ದಿನಗಳ ಹಿಂದೆ ಶಿವಮೊಗ್ಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಲ್ಲಿನ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Add Asianetnews Kannada as a Preferred SourcegooglePreferred

ಈ ಬಗ್ಗೆ ನಟಿಯ ಸಹೋದರ ಮಾಧ್ಯಮಗಳಿಗೆ ಕರೆ ಮಾಡಿ ಇನ್ನು 2 ದಿನಗಳಲ್ಲಿ ಸ್ವತಃ ನಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದಿದ್ದಾರೆ. ಬೆಂಗಳೂರಿನ ಹೊರವಲಯದ ಮಠದಲ್ಲಿ ನಡೆದ ರಾಸಲೀಲೆ ಪ್ರಕರಣದಲ್ಲಿ ಈ ನಟಿ ಭಾಗಿಯಾಗಿದ್ದರು ಎಂಬ ವದಂತಿ ಎಲ್ಲಡೆ ಹರಡಿತ್ತು. ಸ್ವತಃ ನಟಿಯೇ ವಾಹಿನಿಗೆ ಕರೆ ಮಾಡಿ ದೃಶ್ಯದಲ್ಲಿರುವುದು ನಾನಲ್ಲ ಎಂಬುದಾಗಿ ಸ್ಪಷ್ಟೀಕರಣ ನೀಡಿದ್ದಳು.

ಶಿವಮೊಗ್ಗದ ತೀರ್ಥಹಳ್ಳಿಯಳಾದ ಈ ನಟಿ ಕೆಲವಾರು ಚಿತ್ರಗಳಲ್ಲಿ ನಟಿಸಿದ್ದಾಳೆ. ಬಾವಾಜಿ ಪ್ರೊಡಕ್ಷನ್ಸ್'ನ "141" ಎಂಬ ಬಿ ಗ್ರೇಡ್ ಸಿನಿಮಾದಲ್ಲಿ ಈಕೆಯೇ ನಾಯಕಿ. ಅದರಲ್ಲಿ ಸಲಿಂಗ ರತಿಯ ಹಸಿಬಿಸಿ ದೃಶ್ಯಗಳಲ್ಲಿ ಅಭಿನಯಿಸಿದ್ದಾಳೆ. "ಸಂತೋಷಕ್ಕೆ" ಎಂಬ ಚಿತ್ರದ ಆರು ನಾಯಕಿಯರಲ್ಲಿ ಈಕೆಯೂ ಒಬ್ಬಳು. ತುಳು ಭಾಷೆಯ "ಡ್ಯಾನ್ಸ್ ಕುಡ್ಲ ಡ್ಯಾನ್ಸ್" ಸಿನಿಮಾದಲ್ಲೂ ಈಕೆ ನಾಯಕಿ. ಚಿತ್ರದುರ್ಗದ ಸಂಬಂಧಿಯೊಬ್ಬರ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಈ ಹುಡುಗಿಯ ಮೊದಲ ಚಿತ್ರ "ಖತರ್ನಾಕ್". ಇದರಲ್ಲಿ ರೂಪಿಕಾ ಜೊತೆ ನಟಿಸಿರುತ್ತಾಳೆ. ಆ ಬಳಿಕ ಕೆಲ ಚಿತ್ರಗಳಲ್ಲಿ ನಟಿಸಿದ್ದಾಳೆ. ಶುಭಾ ಪೂಜಾ ಜೊತೆ ಸ್ನೇಹಿತೆಯಾಗಿ ನಟಿಸಿದ "ಅದೃಷ್ಟ' ಚಿತ್ರವು ಈಕೆಯ ದುರದೃಷ್ಟಕ್ಕೆ ಬಿಡುಗಡೆಯೇ ಆಗಿಲ್ಲ.