ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ನಿಧನದಿಂದ ತೆರವಾಗಿರುವ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಆಡಳಿತಾರೂಢ ಅಣ್ಣಾಡಿಎಂಕೆ ಪಕ್ಷವು 100 ಕೋಟಿ ರು.ಗಳನ್ನು ಮತದಾರರಿಗೆ ಹಂಚಿದೆ ಎಂದು ಡಿಎಂಕೆ ನೇತಾರ ಎಂ.ಕೆ. ಸ್ಟಾಲಿನ್ ಆರೋಪಿಸಿದ್ದಾರೆ.

ಚೆನ್ನೈ (ಡಿ.18): ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ನಿಧನದಿಂದ ತೆರವಾಗಿರುವ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಆಡಳಿತಾರೂಢ ಅಣ್ಣಾಡಿಎಂಕೆ ಪಕ್ಷವು 100 ಕೋಟಿ ರು.ಗಳನ್ನು ಮತದಾರರಿಗೆ ಹಂಚಿದೆ ಎಂದು ಡಿಎಂಕೆ ನೇತಾರ ಎಂ.ಕೆ. ಸ್ಟಾಲಿನ್ ಆರೋಪಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಅವರು, `ಪ್ರತಿ ಮತದಾರರಿಗೂ 6 ಸಾವಿರ ರು.ನಂತೆ ಅಣ್ಣಾ ಡಿಎಂಕೆ 100 ಕೋಟಿ ರು. ಹಂಚಿದೆ. ಈ ಬಗ್ಗೆ ಆ ಪಕ್ಷದ ಅಭ್ಯರ್ಥಿ ಮಧುಸೂದನನ್ ವಿರುದ್ಧ ಆಯೋಗ ಕ್ರಮ ಜರುಗಿಸಬೇಕು' ಎಂದು ಮನವಿ ಮಾಡಿದ್ದಾರೆ.