- ಶಶಿಕಲಾಗೆ ಜೈಲಿನಲ್ಲಿ ಯಾವುದೇ ವಿಶೇಷ ಸವಲತ್ತು ನೀಡಿಲ್ಲ- ಸವಲತ್ತು ನೀಡಿರುವ ಬಗ್ಗೆ ರೂಪಾ ಮಾಡಿದ್ದು ಸುಳ್ಳು ಆರೋಪ- ಆರೋಪ ಹಿಂದಕ್ಕೆ ಪಡೆಯದಿದ್ದರೆ ಕಾನೂನು ಹೋರಾಟಕ್ಕೆ ಸಿದ್ಧ

ಚೆನ್ನೈ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿತ್ತು ಎಂಬ ಬಂದೀಖಾನೆ ಇಲಾಖೆ ಮಾಜಿ ಡಿಐಜಿ ಡಿ. ರೂಪಾ ಅವರ ಹೇಳಿಕೆಯನ್ನು ಎಐಎಡಿಎಂಕೆ ಸುಳ್ಳು ಎಂದು ಆರೋಪಿಸಿದೆ. ಅಲ್ಲದೆ ರೂಪಾ ಅವರ ಈ ಆರೋಪಗಳನ್ನು ಹಿಂದಕ್ಕೆ ಪಡೆಯದೇ ಇದ್ದಲ್ಲಿ ಅವರ ವಿರುದ್ಧ ಮಾನನಷ್ಟ ಪ್ರಕರಣವೊಂದನ್ನು ದಾಖಲಿಸುವುದಾಗಿ ಪಕ್ಷ ಬೆದರಿಕೆ ಹಾಕಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾವು ವಿಜಯ್ ಕುಮಾರ್ ಅವರ ವರದಿಯನ್ನು ನಿರೀಕ್ಷಿಸುತ್ತಿದ್ದೇವೆ. ಆರೋಪಗಳಿಗೆ ಸಾಕ್ಷ್ಯಗಳಿದ್ದರೆ ಅವರು ಅದನ್ನು ಕೋರ್ಟ್‌ನಲ್ಲಿ ಸಾಬೀತುಪಡಿಸಲಿ. ನಮ್ಮ ನಾಯಕಿ ವಿರುದ್ಧ ಅನವಶ್ಯಕವಾಗಿ ಮಾನಹಾನಿ ಮಾಡಲಾಗಿದೆ. ತಮಿಳುನಾಡಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಹತ್ತಿರ ಬರುತ್ತಿರುವ ವೇಳೆಯಲ್ಲೇ ಆರೋಪಗಳನ್ನು ಮಾಡಲಾಗಿದೆ ಎಂದು ಎಐಎಡಿಎಂಕೆ ಕರ್ನಾಟಕ ಕಾರ್ಯದರ್ಶಿ ಪುಗಝೆಂಡಿ ಹೇಳಿದ್ದಾರೆ. ಜೊತೆಗೆ ಪಕ್ಷದ ಮುಖವಾಣಿ ಪತ್ರಿಕೆಯಲ್ಲೂ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.

ಶಶಿಕಲಾ ನಟರಾಜನ್ ಮತ್ತು ಪಕ್ಷದ ಘನತೆಗೆ ಧಕ್ಕೆ ತರುವ ಸಲುವಾಗಿ ರೂಪಾ ಆಧಾರ ರಹಿತ ಆರೋಪಗಳನ್ನು ಮಾಡಿದ್ದಾರೆ. ಇಬ್ಬರು ಐಪಿಎಸ್ ಅಧಿಕಾರಿಗಳ ನಡುವಿನ ವೈಯಕ್ತಿಕ ಜಗಳದಲ್ಲಿ ಶಶಿಕಲಾ ಅವರನ್ನು ಬಲಿಪಶು ಮಾಡಲಾಗಿದೆ ಎಂದು ಟಿಟಿವಿ ದಿನಕರನ್ ಆರೋಪಿಸಿದ ಬಳಿಕ ರೂಪಾ ವಿರುದ್ಧ ಕೇಸು ದಾಖಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪುಗಝೆಂಡಿ ಹೇಳಿದ್ದಾರೆ.

epaperkannadaprabha.com