ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಶಾಸಕರೋರ್ವರನ್ನು ಭಾನುವಾಋ ಬೆಳ್ಳಂಬೆಳಗ್ಗೆಯೇ ಬಂಧನಕ್ಕೆ ಒಳಪಡಿಸಲಾಗಿದೆ. 

ಚೆನ್ನೈ : ಎಐಎಡಿಎಂ ಶಾಸಕರೋರ್ವರನ್ನು ಚೆನ್ನೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ವಿರುದ್ಧ ಅವಹೇಳನಕಾರಿಯಾದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಕರುಣಾಸ್ ಅವರನ್ನು ಬಂಧನಕ್ಕೆ ಒಳಪಡಿಸಲಾಗಿದೆ. 

ಪ್ರಸಿದ್ಧ ನಟನಾಗಿಯೂ ಗುರುತಿಸಿಕೊಂಡಿರುವ ಕರುಣಾಸ್ ಅವರನ್ನು ಭಾನುವಾರ ಬೆಳ್ಳಂಬೆಳಗ್ಗೆ ಪೊಲೀಸರು ಅವರ ನಿವಾಸದಲ್ಲಿಯೇ ವಶಕ್ಕೆ ಪಡೆದಿದ್ದಾರೆ. 

ತಿರುವಡನಯ್ ಕ್ಷೇತ್ರದ ಶಾಸಕರಾಗಿರುವ ಕರುಣಾಸ್ ಅವರ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.