ಪಕ್ಷದ ಎರಡೆಲೆ ಚಿಹ್ನೆ ಉಳಿಸಿಕೊಳ್ಳಲು ಲಂಚ ನೀಡಿದ ಆರೋಪದಡಿ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ದಿನಕರನ್ ವಿರುದ್ಧ ದೆಹಲಿ ಕ್ರೈಂ ಬ್ರಾಂಚ್​ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಪಕ್ಷದ ಚಿಹ್ನೆಗಾಗಿ ಲಂಚ ನೀಡಿದ ಆರೋಪವನ್ನ ದಿನಕರನ್​ ವಿರುದ್ಧ ಪೊಲೀಸರು ಹೊರಿಸಿದ್ದಾರೆ. ಮಧ್ಯವರ್ತಿಯಾಗಿದ್ದ  ಸುಖೇಶ್'ನನ್ನ ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನವದೆಹಲಿ(ಏ.17): ಅಕ್ರಮ ಆಸ್ತಿ ಸಂಪಾದನೆ ಆರೋಪ ಹೊತ್ತು ಜೈಲುಪಾಲಾಗಿರುವ ಶಶಿಕಲಾ ಸಂಬಂಧಿ ದಿನಕರನ್​ ವಿರುದ್ಧ ದೆಹಲಿ ಪೊಲೀಸರು ಎಫ್'ಐ'ಆರ್ ದಾಖಲಿಸಿದ್ದಾರೆ.

ಪಕ್ಷದ ಎರಡೆಲೆ ಚಿಹ್ನೆ ಉಳಿಸಿಕೊಳ್ಳಲು ಲಂಚ ನೀಡಿದ ಆರೋಪದಡಿ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ದಿನಕರನ್ ವಿರುದ್ಧ ದೆಹಲಿ ಕ್ರೈಂ ಬ್ರಾಂಚ್​ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಪಕ್ಷದ ಚಿಹ್ನೆಗಾಗಿ ಲಂಚ ನೀಡಿದ ಆರೋಪವನ್ನ ದಿನಕರನ್​ ವಿರುದ್ಧ ಪೊಲೀಸರು ಹೊರಿಸಿದ್ದಾರೆ. ಮಧ್ಯವರ್ತಿಯಾಗಿದ್ದ ಸುಖೇಶ್'ನನ್ನ ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ದೆಹಲಿಯ ಹೋಟೆಲ್​ವೊಂದರಲ್ಲಿ ಸುಖೇಶ್​ ತಂಗಿದ್ದಾಗ ಪೊಲೀಸರು ರೇಡ್​ ಮಾಡಿ 1.3 ಕೋಟಿ ಹಣವನ್ನ ವಶಪಡಿಸಿಕೊಂಡಿದ್ದಾರೆ. ಜತೆಗೆ 2 ಐಷರಾಮಿ ಕಾರ್​'ಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ಬಳಿಕ ಟಿಟಿವಿ ದಿನಕರನ್​ಗೆ ಸಮನ್ಸ್​ ಜಾರಿ ಮಾಡಿರುವ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಇನ್ನು ತಮ್ಮ ವಿರುದ್ಧದ ಆರೋಪವನ್ನು ಧಿನಕರ್​ನ ತಳ್ಳಿಹಾಕಿದ್ದಾರೆ. ಪಕ್ಷದ ಚಿಹ್ನೆಗಾಗಿ ನಾನು ಯಾರಿಗೂ ಹಣ ಕೊಟ್ಟಿಲ್ಲ. ಬಂಧಿತ ಮನೋಜ್​ ಯಾರು ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ.