ಐಶ್ವರ್ಯ ರೈ ತಂದೆ ಕೃಷ್ಣರಾಜ್ ಆರೋಗ್ಯ ಸ್ಥಿತಿ ಗಂಭೀರ
ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ತಂದೆ ಕೃಷ್ಣರಾಜ್ ರೈ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು ಹದಿನೈದು ದಿನಗಳ ಹಿಂದೆ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯುಗೆ ವರ್ಗಾಯಿಸಲಾಗಿದೆ ಎಂದು ತಿಳಿದು ಬಂದಿದೆ.
ನವದೆಹಲಿ (ಮಾ.09): ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ತಂದೆ ಕೃಷ್ಣರಾಜ್ ರೈ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು ಹದಿನೈದು ದಿನಗಳ ಹಿಂದೆ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯುಗೆ ವರ್ಗಾಯಿಸಲಾಗಿದೆ ಎಂದು ತಿಳಿದು ಬಂದಿದೆ.
ಐಶ್ವರ್ಯಾ ಹಾಗೂ ಅವರ ಪತಿ ಅಭಿಷೇಕ್ ಬಚ್ಚನ್ ಕೃಷ್ಣರಾಜ್ ಆಸ್ಪತ್ರೆಯಲ್ಲಿದ್ದಾರೆ.
ಐಶ್ವರ್ಯ ರೈ ದುಬೈಗೆ ತೆರಳಿದ್ದು ತಂದೆಯ ಅನಾರೋಗ್ಯ ನಿಮಿತ್ತ ಅದನ್ನು ಅರ್ಧಕ್ಕೆ ಬಿಟ್ಟು ಭಾರತಕ್ಕೆ ವಾಪಸ್ಸಾಗಿದ್ದಾರೆ.