ಸಾರ್ವಜನಿಕ ಹಣವನ್ನು ಈ ರೀತಿ ಅನಾವಶ್ಯಕವಾಗಿ ಅನುತ್ಪಾದಕ ಕೆಲಸಕ್ಕೆ ಬಳಸುವುದು ಸರಿಯಲ್ಲ ಎಂದು ಸಿಎಜಿ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.

ಲಖನೌ(ಮೇ.20): ಉತ್ತರ ಪ್ರದೇಶದ ಹಿಂದಿನ ಅಖಿಲೇಶ್‌ ಯಾದವ್‌ ನೇತೃತ್ವದ ಸರ್ಕಾರ, ನಿರುದ್ಯೋಗಿಗಳಿಗೆ 20 ಕೋಟಿ ರೂಪಾಯಿ ಮೊತ್ತದ ಚೆಕ್‌ ವಿತರಿಸಲು 15 ಕೋಟಿ ರುಪಾಯಿ ದುಂದು ವೆಚ್ಚ ಮಾಡಿದೆ ಎಂದು ಸಿಎಜಿ ವರದಿ ನೀಡಿದೆ.

Add Asianetnews Kannada as a Preferred SourcegooglePreferred

ಬೇರೋಜ್‌'ಗಾರಿ ಭತ್ತಾ ಯೋಜನೆ ಅಡಿಯಲ್ಲಿ 1.26 ಲಕ್ಷ ಫಲಾನುಭವಿಗಳಿಗೆ ಚೆಕ್‌ ವಿತರಣೆಯ ಕಾರ್ಯಕ್ರಮಗಳಲ್ಲಿ ಆಸನ, ತಿಂಡಿ, ಇತರ ಸೌಕರ್ಯಕ್ಕಾಗಿ 8 ಕೋಟಿ ರುಪಾಯಿ ವ್ಯಯಿಸಿದೆ.

ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಬೇಕಿತ್ತಾದರೂ, ಫಲಾನುಭವಿಗಳನ್ನು ಕಾರ್ಯಕ್ರಮ ನಡೆಯುವ ಜಾಗಕ್ಕೆ ಕರೆತರಲು 7 ಕೋಟಿ ರುಪಾಯಿ ವೆಚ್ಚ ಮಾಡಲಾಗಿದೆ. 

ಸಾರ್ವಜನಿಕ ಹಣವನ್ನು ಈ ರೀತಿ ಅನಾವಶ್ಯಕವಾಗಿ ಅನುತ್ಪಾದಕ ಕೆಲಸಕ್ಕೆ ಬಳಸುವುದು ಸರಿಯಲ್ಲ ಎಂದು ಸಿಎಜಿ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.