ಇದೇ ನವೆಂಬರ್ 2, 3 ರಂದು ಎರಡು ದಿಗಳ ಕಾಲ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಿ?ಯಾಕೆ? ಇಲ್ಲಿದೆ ವಿವರ.

ಮಂಡ್ಯ, [ಅ.27]: ಐದು ಕ್ಷೇತ್ರಗಳಿಗೆ ನಡೆಯುತ್ತಿರೋ ರಾಜ್ಯ ಉಪ ಚುನಾವಣೆಗೆ ಇನ್ನು ಆರೇ ದಿನ ಬಾಕಿ. ಮೂರು ಪಕ್ಷಗಳ ಘಟಾಘಟಿ ನಾಯಕರು ಭರ್ಜರಿ ಪ್ರಚಾರ ನಡೆಸ್ತಿದ್ದಾರೆ.. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಡ್ಯ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಇದೇ ನವೆಂಬರ್ 2 ಹಾಗೂ 3ರಂದು ಎರಡು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರ ನಿಯೋಜನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಜೆಡಿಎಸ್ ನ ಪುಟ್ಟರಾಜು ಅವರು ಮಂಡ್ಯ ಲೋಕಸಭಾ ಸದಸ್ಯರಾಗಿದ್ದರು. ಆದ್ರೆ 2018ರ ವಿಧಾನಸಭಾ ಚನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದ್ರಿಂದ ಮಂಡ್ಯ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇದೇ ನವೆಂಬರ್ 3ರಂದು ಮತದಾನ ನಡೆಯಲಿದ್ದು,ನವೆಂಬರ್ 6ರಂದು ಫಲಿತಾಂಶ ಹೊರಬೀಳಿದೆ.