Asianet Suvarna News Asianet Suvarna News

ಲೆನಿನ್, ಪೆರಿಯಾರ್ ಬಳಿಕ ಇದೀಗ ಅಂಬೇಡ್ಕರ್ ಪ್ರತಿಮೆಗೆ ಹಾನಿ

ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆ, ಲೆನಿನ್  ಪ್ರತಿಮೆ ಧ್ವಂಸ ಮಾಡಿದ್ದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಉತ್ತರ ಪ್ರದೇಶದ ಮೀರತ್’ನಲ್ಲಿ  ಅಂಬೇಡ್ಕರ್ ಪ್ರತಿಮೆಗೆ ದುಷ್ಕರ್ಮಿಗಳು ಹಾನಿಯುಂಟು ಮಾಡಿದ್ದಾರೆ.

Ambedkars statue Vandalised

ಲಕ್ನೋ :ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆ, ಲೆನಿನ್  ಪ್ರತಿಮೆ ಧ್ವಂಸ ಮಾಡಿದ್ದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಉತ್ತರ ಪ್ರದೇಶದ ಮೀರತ್’ನಲ್ಲಿ  ಅಂಬೇಡ್ಕರ್ ಪ್ರತಿಮೆಗೆ ದುಷ್ಕರ್ಮಿಗಳು ಹಾನಿಯುಂಟು ಮಾಡಿದ್ದಾರೆ.

ನಿನ್ನೆಯಷ್ಟೇ ತಮಿಳುನಾಡಿನಲ್ಲಿ ಪೆರಿಯಾರ್  ಪ್ರತಿಮೆಗೆ ಹಾನಿಯುಂಟು ಮಾಡಲಾಗಿತ್ತು. ಅದಕ್ಕೂ ಮೊದಲೇ  ತ್ರಿಪುರಾ ಚುನಾವಣಾ ಫಲಿತಾಂಶ ಘೋಷಣೆಯಾದ 48 ತಾಸಿನೊಳಗೆ ಬಿಜೆಪಿ ಕಾರ್ಯಕರ್ತರು ಕಮ್ಯುನಿಸ್ಟ್ ನಾಯಕ ಲೆನಿನ್ ಪ್ರತಿಮೆಯನ್ನು ಬುಲ್ಡೋಜರ್’ನಿಂದ ನೆಲಸಮ ಮಾಡಿದ್ದರು.

ಬೆಲೋನಿಯಾ ನಗರದಲ್ಲಿರುವ ಸೆಂಟರ್ ಕಾಲೇಜಿನಲ್ಲಿ ಕಳೆದ 5 ವರ್ಷಗಳಿಂದ ಇರುವ ಲೆನಿನ್ ಪ್ರತಿಮೆಯನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದರು.  ಇದೀಗ ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ.

Follow Us:
Download App:
  • android
  • ios