Asianet Suvarna News Asianet Suvarna News

ಜನಾರ್ದನ ರೆಡ್ಡಿಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರ ಜೈಲೇ ಗತಿ..!

ಅಂಬಿಡೆಂಟ್ ಹಗರದ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ambidant fraud case Judicial custody to Janardhan Reddy till November 24
Author
Bengaluru, First Published Nov 11, 2018, 4:14 PM IST

ಬೆಂಗಳೂರು, [ನ.11]: ಅಂಬಿಡೆಂಟ್ ಹಗರದ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಂದು [ಭಾನುವಾರ] 1ನೇ ಎಸಿಎಂಎಂ ನ್ಯಾಯಧೀಶ ಜಗದೀಶ್ ಅವರು ಇನ್ನಷ್ಟು ಹೆಚ್ಚಿನ ವಿಚಾರಣೆಗೆ ರೆಡ್ಡಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದ್ದಾರೆ.

ಆಂಬಿಡೆಂಟ್ & ರೆಡ್ಡಿ: ಸುವರ್ಣನ್ಯೂಸ್‌ನಿಂದ Super Exclusive ವರದಿಗಳ ಸರಮಾಲೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿಯನ್ನು ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆಗಾಗಿ ರೆಡ್ಡಿಯನ್ನು ಬಂಧಿಸಿದ್ದರು. ಬಳಿಕ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ರೆಡ್ಡಿಯನ್ನು ಕೋರಮಂಗಲದ 1ನೇ ಎಸಿಎಂಎಂ ನ್ಯಾಯಧೀಶ ಜಗದೀಶ್​ ಅವರ ನಿವಾಸಕ್ಕೆ ಕರೆತರಲಾಗಿತ್ತು.

ಇಂದು ಭಾನುವಾರದ ಇರೋದ್ರಿಂದ ನ್ಯಾಯಾಧೀಶರ ಮನೆಗೆ ಕರೆದೊಯ್ಯಲಾಗಿತ್ತು ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರು, ಜನಾರ್ದನ ರೆಡ್ಡಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ನವೆಂಬರ್ 24ರ ವರೆಗೆ ನ್ಯಾಯಾಂಗ ಬಂಧನ ನ್ಯಾಯಾಧೀಶ ಜಗದೀಶದ ಆದೇಶ ಹೊರಡಿಸಿದ್ದಾರೆ.

Follow Us:
Download App:
  • android
  • ios