ಬೆಂಗಳೂರು(ಮಾ.02): ಡೈರಿ ವಿಚಾರವಾಗಿ  ಸಾಮಾಜಿಕ ಜಾಲತಾಣದಲ್ಲಿ  ಸಚಿವರ ರಾಜೀನಾಮೆ ಬಗ್ಗೆ  ಉಲ್ಲೇಖಿಸಿದ್ದ  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್​ ಅಮೀನ್​ ಮಟ್ಟು ವಿರುದ್ಧ ಸಚಿವರಿಂದ ಅಸಮಾಧಾನ ವ್ಯಕ್ತವಾಗಿದೆ. ಈ ಮಧ್ಯೆ ನಾಲ್ಕು ದಿನಗಳ ಹಿಂದೆಯೇ ಮುಖ್ಯಮಂತ್ರಿಗಳಿಗೆ ಕೆಪಿಸಿಸಿ ಪದಾಧಿಕಾರಿಗಳಿಂದ ಪತ್ರ ಬರೆಯಲ್ಪಟ್ಟಿದ್ದು, ಸಚಿವ ಸಂಪುಟ ಸಭೆಯಲ್ಲೂ ಅಸಮಾಧಾನ ವ್ಯಕ್ತಗೊಂಡಿದೆ.

ಬೆಂಗಳೂರು(ಮಾ.02): ಡೈರಿ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಸಚಿವರ ರಾಜೀನಾಮೆ ಬಗ್ಗೆ ಉಲ್ಲೇಖಿಸಿದ್ದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್​ ಅಮೀನ್​ ಮಟ್ಟು ವಿರುದ್ಧ ಸಚಿವರಿಂದ ಅಸಮಾಧಾನ ವ್ಯಕ್ತವಾಗಿದೆ. ಈ ಮಧ್ಯೆ ನಾಲ್ಕು ದಿನಗಳ ಹಿಂದೆಯೇ ಮುಖ್ಯಮಂತ್ರಿಗಳಿಗೆ ಕೆಪಿಸಿಸಿ ಪದಾಧಿಕಾರಿಗಳಿಂದ ಪತ್ರ ಬರೆಯಲ್ಪಟ್ಟಿದ್ದು, ಸಚಿವ ಸಂಪುಟ ಸಭೆಯಲ್ಲೂ ಅಸಮಾಧಾನ ವ್ಯಕ್ತಗೊಂಡಿದೆ.

ಅಮಿನ್​ ಮಟ್ಟು ಬದಲಾವಣೆಗೆ ಆಗ್ರಹ

ಮೊನ್ನೆಯಷ್ಟೇ ಸಿಎಂ ಮಾಧ್ಯಮ ಸಲಹೆಗಾರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್​ ಮಾಡಿದ್ದ ಸಚಿವ ಆರ್​. ವಿ. ದೇಶಪಾಂಡೆ, ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಅಮೀನ್​ ಮಟ್ಟು ಅವರಿಗೆ ಅಂತಹ ಅಧಿಕಾರ ಕೊಟ್ಟಿಲ್ಲ, ಅವರು ತಮ್ಮ ಇತಿಮಿತಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದಿದ್ದಾರೆ.

ಇನ್ನು ಅಮೀನ್​ ಮಟ್ಟು ಫೇಸ್​ ಬುಕ್​ ಸ್ಟೇಟಸ್​ ವಿಚಾರ ನಿನ್ನೆಯ ಸಚಿವ ಸಂಪುಟ ಸಭೆಯಲ್ಲೂ ಪ್ರಸ್ತಾಪವಾಗಿದ್ದು, ಮಾಧ್ಯಮ ಸಲಹೆಗಾರರನ್ನು ಬದಲಿಸುವಂತೆಯೂ ಸಭೆಯಲ್ಲಿ ಹಿರಿಯ ಸಚಿವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತುಕತೆ ನಡೆಸಿ ವಿವಾದ ಪರಿಹರಿಸುವುದಾಗಿ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ.

ಇನ್ನು ದಿನೇಶ್​ ಅಮೀನ್​ ಮಟ್ಟು ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಹುದ್ದೆಯಿಂದ ಬದಲಿಸಿ ಬೇರೆಯವರನ್ನು ನೇಮಕ ಮಾಡಿಕೊಳ್ಳುವಂತೆ ಕೆಪಿಸಿಸಿಯ ಕೆಲವು ಪದಾಧಿಕಾರಿಗಳು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಒಟ್ಟಾರೆ, ಡೈರಿ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಮಾಧ್ಯಮ ಸಲಹೆಗಾರರ ಸ್ಟೇಟಸ್​ ಈಗ ಸಚಿವರ ಕೋಪ ನೆತ್ತಿಗೇರುವಂತೆ ಮಾಡಿದೆ.

ವರದಿ: ಕಿರಣ್​ ಹನಿಯಡ್ಕ, ಸುವರ್ಣ ನ್ಯೂಸ್​.