Asianet Suvarna News Asianet Suvarna News

ಸುಭದ್ರ ಹಾಗೂ ಅಭಿವೃದ್ಧಿ ಪರ ಸರ್ಕಾರ ಗ್ಯಾರಂಟೀ: ಅಮಿತ್ ಶಾ ವಿಶ್ವಾಸ!

ಸೋಮವಾರ ಸದನದಲ್ಲಿ ಬಹುಮತ ಸಾಬೀತುಪಡಿಸಲಿರುವ ಬಿಎಸ್'ವೈ?| ‘ಕರ್ನಾಟಕದಲ್ಲಿ ಬಿಜೆಪಿಯಿಂದ ಸುಭದ್ರ ಹಾಗೂ ಭಿವೃದ್ದಿ ಪರ ಆಡಳಿತ’| ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ| ಟ್ವೀಟ್ ಮೂಲಕ ಬಿಎಸ್ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ಅಮಿತ್ ಶಾ| ‘ಸುಭದ್ರ ಹಾಗೂ ಅಭಿವೃದ್ಧಿ ಪರ ಆಡಳಿತ ನೀಡುವುದೇ ಬಿಜೆಪಿ ಗುರಿ’|

Amit Shah Promises BJP Will Give Stable and dDevelopment-Oriented In Karnataka
Author
Bengaluru, First Published Jul 27, 2019, 7:11 PM IST

ನವದೆಹಲಿ(ಜು.27): ಇದೇ ಸೋಮವಾರ(ಜು.29)ದಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸದನದಲ್ಲಿ ಬಹುಮತ ಸಾಬೀತು ಮಾಡಬೇಕಿದ್ದು, ಇಡೀ ದೇಶದ ಚಿತ್ತ ಇದೀಗ ಕರ್ನಾಟಕ ವಿಧಾನಸಭೆಯತ್ತ ನೆಟ್ಟಿದೆ.

ಈ ಮಧ್ಯೆ ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸುಭದ್ರ ಹಾಗೂ ಅಭಿವೃದ್ಧಿ ಪರ ಆಡಳಿತ ನೀಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ ಭರವಸೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ, ಯಡಿಯೂರಪ್ಪ ಸರ್ಕಾರ ಕರ್ನಾಟಕದಲ್ಲಿ ಸುಭದ್ರ ಹಾಗೂ ಅಭಿವೃದ್ಧಿ ಪರ ಆಡಳಿತ ನೀಡಲಿದೆ ಎಂದು ದೇಶದ ಜನರಿಗೆ ಭರವಸೆ ನೀಡುವುದಾಗಿ ಹೇಳಿದ್ದಾರೆ.

Follow Us:
Download App:
  • android
  • ios