ರವಿವಾರ ಮಧ್ಯಾಹ್ನ  2 ಗಂಟೆಯಿಂದ ಸಂಜೆ ೬ ಗಂಟೆಯವರೆಗೆ  ನಾಗಪುರದ ಆರ್‌ಎಸ್‌ಎಸ್ ಮುಖ್ಯಾಲಯದಲ್ಲಿ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಜೊತೆಗೆ ಸುದೀರ್ಘ ಮಾತುಕತೆ ನಡೆಸಿರುವ ಅಮಿತ್ ಶಾ ಕರ್ನಾಟಕದಲ್ಲಿ ಗೆಲ್ಲುವುದು ಹೇಗೆ, ಸಂಘದ ಪ್ಲಾನ್ ಏನು ಎಂಬುದರ ಬಗ್ಗೆ ಬಹಳ ಹೊತ್ತು ಚರ್ಚೆ ನಡೆಸಿದ್ದಾರೆ. 

ಬೆಂಗಳೂರು (ಮಾ. 06): ರವಿವಾರ ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ನಾಗಪುರದ ಆರ್‌ಎಸ್‌ಎಸ್ ಮುಖ್ಯಾಲಯದಲ್ಲಿ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಜೊತೆಗೆ ಸುದೀರ್ಘ ಮಾತುಕತೆ ನಡೆಸಿರುವ ಅಮಿತ್ ಶಾ ಕರ್ನಾಟಕದಲ್ಲಿ ಗೆಲ್ಲುವುದು ಹೇಗೆ, ಸಂಘದ ಪ್ಲಾನ್ ಏನು ಎಂಬುದರ ಬಗ್ಗೆ ಬಹಳ ಹೊತ್ತು ಚರ್ಚೆ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತ್ರಿಪುರಾದ ಗೆಲುವಿನ ವರದಿ ನೀಡಲು ಹೋಗಿದ್ದ ಶಾ ಕೊನೆಗೆ ಸುಮಾರು ಒಂದು ಗಂಟೆ ಕರ್ನಾಟಕದ ಪರಿಸ್ಥಿತಿ, ಅಲ್ಲಿನ ಸ್ಥಳೀಯ ಸಂಘ ನಾಯಕರ ಅಭಿಪ್ರಾಯ, ಗೆಲ್ಲುವುದಕ್ಕೆ ಏನೇನು ಮಾಡಬೇಕು ಎಂಬುದರ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕದವರೇ ಆಗಿರುವ ಆರ್‌ಎಸ್‌ಎಸ್ ನಾಯಕರಾದ ದತ್ತಾತ್ರೇಯ ಹೊಸಬಾಳೆ, ಮಂಗೇಶ್ ಬೆಂಡೆ ಮತ್ತು ಮುಕುಂದ ಕೂಡ ಇದ್ದರು. ಸಂಘದ ಮೂಲಗಳು ಹೇಳುತ್ತಿರುವ ಪ್ರಕಾರ ಸದ್ಯದ ಮಟ್ಟಿಗೆ ಕರ್ನಾಟಕದಲ್ಲಿ ಬಿಜೆಪಿ 90 ರಿಂದ 95 ಸ್ಥಾನಗಳ ಆಸುಪಾಸು ಗೆಲ್ಲುವ ಸಾಧ್ಯತೆಯಿದ್ದು, ಇದನ್ನು ಜಾಸ್ತಿ ಮಾಡಬೇಕಾದರೆ ಏನೆಲ್ಲ ಮಾಡಬೇಕು, ಕೆಲ ವಿಷಯಗಳ ಬಗ್ಗೆ ಸ್ಥಳೀಯ ಸಂಘದ ನಾಯಕರಿಗಿರುವ ಅಸಮಾಧಾನದ ಕುರಿತು ಚರ್ಚೆ ನಡೆದಿದೆ. ಟಿಕೆಟ್ ಹಂಚಿಕೆ ಬಗ್ಗೆ ರಾಜ್ಯ ನಾಯಕರ ಗುದ್ದಾಟದ ಬಗ್ಗೆ ಕೂಡ ಚರ್ಚೆ ನಡೆದಿದೆ. ಸಂಘದ ಮೂಲಗಳು ಹೇಳುತ್ತಿರುವ ಪ್ರಕಾರ ಮೋಹನ್ ಭಾಗವತ್ ಎದುರು ಅಮಿತ್ ಶಾ ‘ಕರ್ನಾಟಕ ಗೆಲ್ಲಬೇಕಾದರೆ ನಾನೇ ಹೋಗಿ 2 ತಿಂಗಳು ಕುಳಿತುಕೊಳ್ಳುತ್ತೇನೆ.

ರಾಜ್ಯ ನಾಯಕರ ಮಧ್ಯೆ ಸಮಸ್ಯೆಗಳಿವೆ. ಆದರೆ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಸಾರ್ವತ್ರಿಕವಾಗಿದೆ ಎಂಬುದು ನಮಗಿರುವ ಲಾಭದಾಯಕ ಅಂಶ’ ಎಂದು ಹೇಳಿ ಬಂದಿದ್ದಾರೆ. ನಂತರ ಹೊರಗೆ ಬಂದ ಅಮಿತ್ ಶಾ ಪತ್ರಕರ್ತರಿಗೆ ‘ಕರ್ನಾಟಕದಲ್ಲಿ ಗೆಲ್ಲೋದು ನಾವೇ. 100 ಪರ್ಸೆಂಟ್ ಈಗಲೇ ಬರೆದುಕೊಂಡು ಇಡಿ’ ಎಂದು ಆತ್ಮ ವಿಶ್ವಾಸದಿಂದ ಹೇಳಿದ್ದಾರೆ.

ರಾಷ್ಟ್ರ ರಾಜಕಾರಣದ ಬಗ್ಗೆ ಹೆಚ್ಚಿನ ಸುದ್ದಿಗೆ ಈ ಇಂಡಿಯಾ ಗೇಟ್ ಕ್ಲಿಕ್ ಮಾಡಿ