ಇನ್ನು ಕೆಲವೇ ನಿಮಿಷಗಳಲ್ಲಿ ಮಣ್ಣಾಗಿ ಹೋಗಲಿದ್ದಾರೆ. ಕೊನೆಯ ಬಾರಿ ಅವರ ಮುಖವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದಾರೆ. ಅವರನ್ನು ನಿಯಂತ್ರಿಸಲು ಪೋಲಿಸರು ಹರಸಾಹಸ ಪಡುತ್ತಿದ್ದಾರೆ.
ಚೆನ್ನೈ (ಡಿ.06): ತಮಿಳು ನಾಡು ಮಾಜಿ ಮುಖ್ಯಮಂತ್ರಿ ಸೆಲ್ವಿ ಜಯಲಲಿತಾ ಅಂತ್ಯ ಸಂಸ್ಕಾರಕ್ಕೆ ಮರೀನಾ ಬೀಚ್ ನಲ್ಲಿ ಸಕಲ ಸಿದ್ಧತೆ ನಡೆದಿದೆ.
ಇನ್ನು ಕೆಲವೇ ನಿಮಿಷಗಳಲ್ಲಿ ಮಣ್ಣಾಗಿ ಹೋಗಲಿದ್ದಾರೆ. ಕೊನೆಯ ಬಾರಿ ಅವರ ಮುಖವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದಾರೆ. ಅವರನ್ನು ನಿಯಂತ್ರಿಸಲು ಪೋಲಿಸರು ಹರಸಾಹಸ ಪಡುತ್ತಿದ್ದಾರೆ.
ತಮಿಳು ನಾಡಿನ ಅಧಿನಾಯಕಿ ಮಣ್ಣಲ್ಲಿ ಮಣ್ಣಾಗಿ ಹೋಗಲಿದ್ದಾರೆ. ಅಗಲಿದ ಅಮ್ಮನನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ ರಾಜ್ಯದ ಜನ. ತಮ್ಮ ರಾಜಕೀಯ ಗುರು ಎಂಜಿಆರ್ ಸಮಾಧಿ ಪಕ್ಕದಲ್ಲೇ ಇವರು ಶಾಶ್ವತವಾಗಿ ಉಳಿಯಲಿದ್ದಾರೆ.
ತಮ್ಮ ಜಾತಿ ಅಯ್ಯಂಗಾರಿ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ನಡೆಯದೇ ಹೂಳುವ ಮೂಲಕ ದೇಹವನ್ನು ಮಣ್ಣು ಮಾಡಲಾಗುತ್ತಿದೆ. ದತ್ತು ಪುತ್ರ ಸುಧಾಕರನ್ ಅಂತ್ಯ ಸಂಸ್ಕಾರದ ವಿಧಿ ವಿಧಾನವನ್ನು ಪೂರೈಸುವ ನಿರೀಕ್ಷೆಯಿದೆ.
