ಗಾಂಧಿವಾದಿ ಅಣ್ಣಾ ಹಜಾರೆ ಇವತ್ತು ದೆಹಲಿಯ ರಾಜ್ ಘಾಟ್ ನಲ್ಲಿ ಮೌನ ಪ್ರತಿಭಟನೆ ನಡೆಸಿದರು.

ನವದೆಹಲಿ (ಅ.02):  ಗಾಂಧಿವಾದಿ ಅಣ್ಣಾ ಹಜಾರೆ ಇವತ್ತು ದೆಹಲಿಯ ರಾಜ್ ಘಾಟ್ ನಲ್ಲಿ ಮೌನ ಪ್ರತಿಭಟನೆ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲೋಕ್ ಪಾಲ್ ಮಂಡನೆಗೆ ಒತ್ತಾಯಿಸಿ ನಡೆಸಿದ ಸಾಂಕೇತಿಕ ನಿರಶನದ ನಂತರ ಮಾತನಾಡಿದ ಅಣ್ಣಾ ಹಜಾರೆ ಇದುವರೆಗೂ ಪ್ರಧಾನಿ ಮೋದಿಯವರಿಗೆ 30 ಪತ್ರಗಳನ್ನ ಬರೆದಿದ್ದು ಇಲ್ಲಿಯವರೆಗೂ ಮೋದಿಯಿಂದ ಒಂದೇ ಒಂದು ಪತ್ರಕ್ಕು ಉತ್ತರ ದೊರೆತಿಲ್ಲ ಅಂತಾ ಹೇಳಿದ್ದಾರೆ. ಲೋಕಪಾಲ್ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ . ಸಾಂಕೇತಿಕ ನಿರಶನದ ನಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದಿರುವ ಅಣ್ಣಾ ಹಜಾರೆ ಪ್ರತಿಭಟನೆ ವೇಳೆ ಹಲವು ವಿಷಯಗಳನ್ನ ಸರ್ಕಾರದ ಮುಂದಿಡುತ್ತೇವೆ ಎಂದಿದ್ದಾರೆ.