ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ಮೌಢ್ಯ ನಿಷೇಧ ಕಾಯ್ದೆ ಬಹುತೇಕ ಮುಂದಿನ ಅಧಿವೇಶನದಲ್ಲಿ ಮಂಡನೆಯಾಗುವುದು ಖಚಿತವಾಗಿದೆ. ಹಲವು ಅಡೆತಡೆಗಳು, ವಿರೋಧದ ಬಳಿಕ ಸಚಿವ ಸಂಪುಟ ಉಪಸಮಿತಿಯಿಂದ ಮಸೂದೆಯ ರೂಪುರೇಷೆ ಕಾನೂನು ಇಲಾಖೆಗೆ ಶಿಫಾರಸುಗೊಂಡಿದೆ. ಹಲವು ಮಹತ್ವದ ಅಂಶಗಳು ಶಿಫಾರಸಿನಲ್ಲಿ ಉಲ್ಲೇಖಗೊಂಡಿವೆ.

ಬೆಂಗಳೂರು(ಜೂ.29): ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ಮೌಢ್ಯ ನಿಷೇಧ ಕಾಯ್ದೆ ಬಹುತೇಕ ಮುಂದಿನ ಅಧಿವೇಶನದಲ್ಲಿ ಮಂಡನೆಯಾಗುವುದು ಖಚಿತವಾಗಿದೆ. ಹಲವು ಅಡೆತಡೆಗಳು, ವಿರೋಧದ ಬಳಿಕ ಸಚಿವ ಸಂಪುಟ ಉಪಸಮಿತಿಯಿಂದ ಮಸೂದೆಯ ರೂಪುರೇಷೆ ಕಾನೂನು ಇಲಾಖೆಗೆ ಶಿಫಾರಸುಗೊಂಡಿದೆ. ಹಲವು ಮಹತ್ವದ ಅಂಶಗಳು ಶಿಫಾರಸಿನಲ್ಲಿ ಉಲ್ಲೇಖಗೊಂಡಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯ ಸರ್ಕಾರದ ಬಹುನಿರೀಕ್ಷಿತ ಮೌಢ್ಯ ನಿಷೇಧ ಕಾಯ್ದೆ ಜಾರಿ ಸಂಬಂಧ ಕೊನೆಗೂ ಒಂದಷ್ಟು ಬೆಳವಣಿಗೆಯಾಗಿದೆ. ಸಾಕಷ್ಟು ವಿರೋಧ, ಗೊಂದಲಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಯ್ದೆಯ ರೂಪು ರೇಷೆ ಸಿದ್ಧಗೊಂಡಿದೆ. ಈ ಸಂಬಂಧ ರಚಿತಗೊಂಡಿದ್ದ ಸಚಿವ ಸಂಪುಟ ಉಪಸಮಿತಿ ತನ್ನ ಶಿಫಾರಸುಗಳನ್ನು ಕಾನೂನು ಇಲಾಖೆಗೆ ರವಾನಿಸಿದೆ. ಬಹುತೇಕ ಮುಂದಿನ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಕಾಯ್ದೆ ಮಂಡನೆಯಾಗುವ ಸಾಧ್ಯತೆಗಳು ನಿಚ್ಚಳವಾಗಿವೆ.

ಸಂಪುಟ ಉಪಸಮಿತಿ ಶಿಫಾರಸಿನಲ್ಲಿ ಏನಿದೆ?

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಧ್ಯಕ್ಷತೆಯ ಮೌಢ್ಯ ಪ್ರತಿಬಂಧಕ ಕಾಯ್ದೆ ಕುರಿತ ಸಂಪುಟ ಉಪಸಮಿತಿ ಹಲವು ಪ್ರಮುಖ ಶಿಫಾರಸುಗಳನ್ನ ಮಾಡಿದೆ. ಅವುಗಳಲ್ಲಿ ಪ್ರಮುಖವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಆದ್ಯತೆ ನೀಡುವಿಕೆ, ಜ್ಯೋತಿಷಿಗಳಿಗೆ ಕಡಿವಾಣ ಹಾಕುವ ವಿಚಾರ ಕೂಡಾ ಉಲ್ಲೇಖವಾಗಿದೆ. ಇನ್ನು ದೇವರ ಹೆಸರಿನಲ್ಲಿ ಪ್ರಾಣಿ ಹಿಂಸೆ, ಮಡೆಸ್ನಾನದಂತಹ ಮೌಢ್ಯಗಳನ್ನು ನಿಷೇಧಿಸುವಂತೆಯೂ ಹೇಳಲಾಗಿದೆ. ಜತೆಗೆ ಮನುಕುಲಕ್ಕೆ ಅನಾನುಕೂಲವಾಗುವಂತಹ ವಿಚಾರಗಳು, ಕೆಲವು ಕಠೋರ ಪದ್ದತಿಗಳನ್ನು ಕೈಬಿಡಲು ಕೂಡಾ ಸೂಚಿಸಲಾಗಿದೆ.

ಒಟ್ನಲ್ಲಿ ಸಿಎಂ ಸಿದ್ರಾಮಯ್ಯ ಪದೇಪದೇ ಮೌಢ್ಯ ವಿರೋಧಿ ಕಾಯ್ದೆ ಜಾರಿ ಬಗ್ಗೆ ಹೇಳ್ತಿದ್ರು. ಇವಾಗ ಕಾಗೋಡು ತಿಮ್ಮಪ್ಪ ನೇತೃತ್ವದ ಸಂಪುಟ ಉಪಸಮಿತಿ ಮಾಡಿರೋ ಶಿಫಾರಸುಗಳನ್ನ ಒಳಗೊಂಡ ವಿಧೇಯಕ ಮುಂಬರೋ ಅಧಿವೇಶನದಲ್ಲಿ ಮಂಡನೆಯಾಗುವ ಭರವಸೆ ವ್ಯಕ್ತವಾಗಿದೆ.

ವರದಿ: ಕಿರಣ್​ ಹನಿಯಡ್ಕ, ಸುವರ್ಣ ನ್ಯೂಸ್​.