ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ‘ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷ’ದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಯ್ಕೆ ಪ್ರಕಿಯೆ ಪ್ರಾರಂಭಿಸಿರುವ ಪಕ್ಷದ ಸಂಸ್ಥಾಪಕಿ ಅನುಪಮಾ ಶೆಣೈ, ಕಳಂಕರಹಿತ ಹಾಗೂ ಸಾಮಾಜಿಕ ಮೌಲ್ಯಗಳುಳ್ಳವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ‘ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷ’ದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಯ್ಕೆ ಪ್ರಕಿಯೆ ಪ್ರಾರಂಭಿಸಿರುವ ಪಕ್ಷದ ಸಂಸ್ಥಾಪಕಿ ಅನುಪಮಾ ಶೆಣೈ, ಕಳಂಕರಹಿತ ಹಾಗೂ ಸಾಮಾಜಿಕ ಮೌಲ್ಯಗಳುಳ್ಳವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಂಕ ರಹಿತರು, ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡಲಾಗುವುದು, ಅಲ್ಲದೆ, ಪಕ್ಷದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗುವುದು.

ಆಸಕ್ತರು ತಮ್ಮ ಸೇವೆಗೆ ಸಂಬಂಧಿಸಿದಂತಹ ವಿವರಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.