ಹಾಡಹಗಲೇ ನಡೆಯಿತು ಭಯಾನಕ ಕೃತ್ಯ : ಸುಮ್ ಸುಮ್ನೆ ಪೊಲೀಸರಿಂದಲೇ ಶೂಟೌಟ್
ಹಾಡಹಗಲೇ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಾಹನ ನಿಲ್ಲಿಸದ ಹಿನ್ನೆಲೆಯಲ್ಲಿ ಎನ್ ಕೌಂಟರ್ ಮಾಡಲಾಗಿದೆ.
ಲಕ್ನೋ : ಉತ್ತರ ಪ್ರದೇಶದಲ್ಲಿ ಪೇದೆಯೋರ್ವ ಮೊಬೈಲ್ ಕಂಪನಿಯ ಮ್ಯಾನೇಜರ್ ಓರ್ವರನ್ನು ಹತ್ಯೆ ಮಾಡಿರುವ ಪ್ರಕರಣ ನಡೆದಿದೆ. ಇಲ್ಲಿನ ಮ್ಯಾಕ್ ಡಂಪರ್ ಪ್ರದೇಶದಲ್ಲಿ ಶನಿವಾರ ಈ ದರ್ಘಟನೆ ನಡೆದಿದೆ.
ಅನಾರೋಗ್ಯಕ್ಕೆ ಒಳಗಾಗಿದ್ದ ವಿವೇಕ್ ತಿವಾರಿ ಹಾಗೂ ಅವರ ಸ್ನೇಹಿತೆ ಸನಾ ಖಾನ್ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಪೊಲೀಸ್ ಪೇದೆ ಅವರನ್ನು ಪರಿಶೀಲನೆ ನಡೆಸಿ, ವಾಹನವನ್ನು ನಿಲ್ಲಿಸುವಂತೆ ತಿಳಿಸಿದ್ದಾರೆ. ಈ ವೇಳೆ ವಾಹನ ನಿಲ್ಲಿಸದ ಹಿನ್ನೆಲೆಯಲ್ಲಿ ಅವರ ಮೇಲೆ ಪೊಲೀಸ್ ಪೇದೆ ಗುಂಡು ಹಾರಿಸಿದ್ದಾರೆ.
ಈ ಗಾಜನ್ನು ಸೀಳಿ ಒಳನುಗ್ಗಿದ ಗುಂಡು ತಿವಾರಿ ತಲೆಗೆ ಬಡಿದಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ.
ಅವರ ಗೆಳತಿ ಸನಾ ಖಾನ್ ದೂರು ನೀಡಿದ್ದು ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಪೇದೆ ಪ್ರಶಾಂತ್ ಕುಮಾರ್ ಮೇಲೆ ಕೊಲೆ ಕೇಸ್ ದಾಖಲು ಮಾಡಲಾಗಿದೆ.
#WATCH Kalpana Tiwari,wife of deceased Vivek Tiwari says,"Police had no right to shoot at my husband,demand UP CM to come here&talk to me." He was injured&later succumbed to injuries after a police personnel shot at his car late last night,on noticing suspicious activity #Lucknow pic.twitter.com/buJyDWts5n
— ANI UP (@ANINewsUP) September 29, 2018