ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರಗಾಮಿಗಳ ದಾಳಿಯ ನಂತರ ಕಣಿವೆ ಪ್ರದೇಶದಲ್ಲಿ ಭದ್ರತೆಯನ್ನು ಇನ್ನಷ್ಟು ಬಲಗೊಳಿಸುವ ಬಗ್ಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಧಿಕಾರಿಗಳ ಜೊತೆ ಶ್ರೀನಗರದಲ್ಲಿ ಸಭೆ ನಡೆಸಿದ್ದಾರೆ.

ನವದೆಹಲಿ (ಜು.11): ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರಗಾಮಿಗಳ ದಾಳಿಯ ನಂತರ ಕಣಿವೆ ಪ್ರದೇಶದಲ್ಲಿ ಭದ್ರತೆಯನ್ನು ಇನ್ನಷ್ಟು ಬಲಗೊಳಿಸುವ ಬಗ್ಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಧಿಕಾರಿಗಳ ಜೊತೆ ಶ್ರೀನಗರದಲ್ಲಿ ಸಭೆ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಮರನಾಥ್ ಯಾತ್ರೆಯಲ್ಲಿ ಉಗ್ರರ ಅಟ್ಟಹಾಸಕ್ಕೆ ಬಲಿಯಾದ 7 ಯಾತ್ರಾರ್ಥಿಗಳ ಕುಟುಂಬಕ್ಕೆ ಕೇಂದ್ರ ಸರ್ಕಾರ ತಲಾ 7 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ 1 ಲಕ್ಷ ರೂ ಪರಿಹಾರ ಘೋಷಿಸಿದೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಯೋತ್ಪಾದಕರ ದಾಳಿಯನ್ನು ಖಂಡಿಸಿದ್ದು, ದಾಳಿಯ ಹಿಂದಿರುವವರನ್ನು ಪತ್ತೆ ಹಚ್ಚಿ ಸರಿಯಾಗಿ ಶಿಕ್ಷೆ ವಿಧಿಸಿ ಮೃತಪಟ್ಟವರಿಗೆ ನ್ಯಾಯ ಒದಗಿಸಿ ಎಂದು ಜಮ್ಮು-ಕಾಶ್ಮೀರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ದಾಳಿಯನ್ನು ಖಂಡಿಸಿದ್ದು ಕಾಶ್ಮೀರ ಸರ್ಕಾರಕ್ಕೆ ಇನ್ನಷ್ಟು ಸಹಾಯ ಹಸ್ತ ಚಾಚಿದ್ದಾರೆ.