ನೋಟು ನಿಷೇಧ ವಿರುದ್ಧ ತೃಣಮೂಲ ಕಾಂಗ್ರೆಸ್ ಪ್ರತಿಭಟನೆಯನ್ನು ಹತ್ತಿಕ್ಕಲೆಂದೇ ಟೋಲ್ ಬೂತ್ ಗಳಲ್ಲಿ ಸೇನೆಯನ್ನು ನಿಯೋಜಿಸಲಾಗಿತ್ತು  ಎಂದು ಆರೋಪಿಸಿರುವ ಮಮತಾ ಬ್ಯಾನರ್ಜಿಗೆ ಭಾರತೀಯ ಸೇನೆ ಸ್ಪಷ್ಟೀಕರಣ ನೀಡಿದೆ.

ನವದೆಹಲಿ (ಡಿ.02): ನೋಟು ನಿಷೇಧ ವಿರುದ್ಧ ತೃಣಮೂಲ ಕಾಂಗ್ರೆಸ್ ಪ್ರತಿಭಟನೆಯನ್ನು ಹತ್ತಿಕ್ಕಲೆಂದೇ ಟೋಲ್ ಬೂತ್ ಗಳಲ್ಲಿ ಸೇನೆಯನ್ನು ನಿಯೋಜಿಸಲಾಗಿತ್ತು ಎಂದು ಆರೋಪಿಸಿರುವ ಮಮತಾ ಬ್ಯಾನರ್ಜಿಗೆ ಭಾರತೀಯ ಸೇನೆ ಸ್ಪಷ್ಟೀಕರಣ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೂಗ್ಲಿ ಬ್ರಿಜ್ ಬಳಿ ಇರುವ ಹೆದ್ದಾರಿ ಸುಂಕ ಕೇಂದ್ರದಲ್ಲಿ ಕೆಲ ಮಾಹಿತಿ ಕೋರಿ ಸೈನಿಕರು ಆಗಮಿಸಿದ್ದರು. ಈ ಸುಂಕ ವಸೂಲಾತಿ ಕೇಂದ್ರವು ಸಚಿವಾಲಯದಿಂದ 500 ಮೀಟರ್ ಮಾತ್ರವೇ ದೂರವಿದೆ. ರಾಜ್ಯ ಸರಕಾರದ ಗಮನಕ್ಕೆ ತರದೆಯೇ ಸೇನೆಯು ಈ ಸೂಕ್ಷ್ಮ ಪ್ರದೇಶಕ್ಕೆ ಹೇಗೆ ಬಂದಿತೆಂಬುದು ಮಮತಾ ಬ್ಯಾನರ್ಜಿಯವರ ಪ್ರಶ್ನೆ. ಪ್ರಜಾತಂತ್ರ ವ್ಯವಸ್ಥೆಯನ್ನು ರಕ್ಷಿಸುವುದಕ್ಕೋಸ್ಕರ ಸೇನೆ ಇಲ್ಲಿಂದ ಕಾಲ್ತೆಯುವವರೆಗೂ ತಾನು ಸಚಿವಾಲಯದಿಂದ ಹೊರಹೋಗುವುದಿಲ್ಲವೆಂದು ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಮತಾ ಬ್ಯಾನರ್ಜಿ ನಿನ್ನೆ ಹೇಳಿಕೆ ನೀಡಿದರು.

ಈ ಬಗ್ಗೆ ಭಾರತೀಯ ಸೇನೆ ಪ.ಬಂ. ಸರ್ಕಾರಕ್ಕೆ ಇಂದು ವಿವರಣೆ ನೀಡಿ 4 ಪತ್ರಗಳನ್ನು ಕಳುಹಿಸಿ ಸ್ಪಷ್ಟೀಕರಣ ನೀಡಿದೆ. ಸಂಬಂಧಪಟ್ಟ ಇಲಾಖೆಯಿಂದ ಅನುಮತಿಯನ್ನು ಪಡೆಯಲಾಗಿತ್ತು ಎಂದು ಮೇಜರ್ ಜನರಲ್ ಸುನೀಲ್ ಯಾದವ್ ಹೇಳಿದ್ದಾರೆ.

Scroll to load tweet…