ನೋಟು ನಿಷೇಧ ವಿರುದ್ಧ ತೃಣಮೂಲ ಕಾಂಗ್ರೆಸ್ ಪ್ರತಿಭಟನೆಯನ್ನು ಹತ್ತಿಕ್ಕಲೆಂದೇ ಟೋಲ್ ಬೂತ್ ಗಳಲ್ಲಿ ಸೇನೆಯನ್ನು ನಿಯೋಜಿಸಲಾಗಿತ್ತು  ಎಂದು ಆರೋಪಿಸಿರುವ ಮಮತಾ ಬ್ಯಾನರ್ಜಿಗೆ ಭಾರತೀಯ ಸೇನೆ ಸ್ಪಷ್ಟೀಕರಣ ನೀಡಿದೆ.

ನವದೆಹಲಿ (ಡಿ.02): ನೋಟು ನಿಷೇಧ ವಿರುದ್ಧ ತೃಣಮೂಲ ಕಾಂಗ್ರೆಸ್ ಪ್ರತಿಭಟನೆಯನ್ನು ಹತ್ತಿಕ್ಕಲೆಂದೇ ಟೋಲ್ ಬೂತ್ ಗಳಲ್ಲಿ ಸೇನೆಯನ್ನು ನಿಯೋಜಿಸಲಾಗಿತ್ತು ಎಂದು ಆರೋಪಿಸಿರುವ ಮಮತಾ ಬ್ಯಾನರ್ಜಿಗೆ ಭಾರತೀಯ ಸೇನೆ ಸ್ಪಷ್ಟೀಕರಣ ನೀಡಿದೆ.

Add Asianetnews Kannada as a Preferred SourcegooglePreferred

ಹೂಗ್ಲಿ ಬ್ರಿಜ್ ಬಳಿ ಇರುವ ಹೆದ್ದಾರಿ ಸುಂಕ ಕೇಂದ್ರದಲ್ಲಿ ಕೆಲ ಮಾಹಿತಿ ಕೋರಿ ಸೈನಿಕರು ಆಗಮಿಸಿದ್ದರು. ಈ ಸುಂಕ ವಸೂಲಾತಿ ಕೇಂದ್ರವು ಸಚಿವಾಲಯದಿಂದ 500 ಮೀಟರ್ ಮಾತ್ರವೇ ದೂರವಿದೆ. ರಾಜ್ಯ ಸರಕಾರದ ಗಮನಕ್ಕೆ ತರದೆಯೇ ಸೇನೆಯು ಈ ಸೂಕ್ಷ್ಮ ಪ್ರದೇಶಕ್ಕೆ ಹೇಗೆ ಬಂದಿತೆಂಬುದು ಮಮತಾ ಬ್ಯಾನರ್ಜಿಯವರ ಪ್ರಶ್ನೆ. ಪ್ರಜಾತಂತ್ರ ವ್ಯವಸ್ಥೆಯನ್ನು ರಕ್ಷಿಸುವುದಕ್ಕೋಸ್ಕರ ಸೇನೆ ಇಲ್ಲಿಂದ ಕಾಲ್ತೆಯುವವರೆಗೂ ತಾನು ಸಚಿವಾಲಯದಿಂದ ಹೊರಹೋಗುವುದಿಲ್ಲವೆಂದು ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಮತಾ ಬ್ಯಾನರ್ಜಿ ನಿನ್ನೆ ಹೇಳಿಕೆ ನೀಡಿದರು.

ಈ ಬಗ್ಗೆ ಭಾರತೀಯ ಸೇನೆ ಪ.ಬಂ. ಸರ್ಕಾರಕ್ಕೆ ಇಂದು ವಿವರಣೆ ನೀಡಿ 4 ಪತ್ರಗಳನ್ನು ಕಳುಹಿಸಿ ಸ್ಪಷ್ಟೀಕರಣ ನೀಡಿದೆ. ಸಂಬಂಧಪಟ್ಟ ಇಲಾಖೆಯಿಂದ ಅನುಮತಿಯನ್ನು ಪಡೆಯಲಾಗಿತ್ತು ಎಂದು ಮೇಜರ್ ಜನರಲ್ ಸುನೀಲ್ ಯಾದವ್ ಹೇಳಿದ್ದಾರೆ.

Scroll to load tweet…