ಇಹಲೋಕದ ಯಾತ್ರೆ ಮುಗಿಸಿದ ಅರುಣ್ ಜೇಟ್ಲಿ| ದೆಹಲಿಯ ನಿಗಮ್ ಬೋದ್ ಘಾಟ್’ನಲ್ಲಿ ಜೇಟ್ಲಿ ಅಂತ್ಯಕ್ರಿಯೆ| ಸಕಲ ಸರ್ಕಾರಿ ಗೌರವಗಳೊಂದಿಗೆ ಜೇಟ್ಲಿ ಅಂತ್ಯಕ್ರಿಯೆ| ತಂದೆ ಚಿತೆಗೆ ಅಗ್ನಿಸ್ಪರ್ಶ ಮಾಡಿದ ಮಗ ರೋಹನ್ ಜೇಟ್ಲಿ| ತೀವ್ರ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದ ಮಾಜಿ ವಿತ್ತ ಸಚಿವ ಜೇಟ್ಲಿ| ಅಂತ್ಯ ಸಂಸ್ಕಾರದಲ್ಲಿ ಬಿಜೆಪಿ, ಪ್ರತಿಪಕ್ಷ ನಾಯಕರೂ ಸೇರಿದಂತೆ ಹಲವು ಗಣ್ಯರು ಭಾಗಿ|

ನವದೆಹಲಿ(ಆ.25): ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು. ದೆಹಲಿಯ ನಿಗಮ್ ಬೋಧ್ ಘಾಟ್’ನಲ್ಲಿ ಜೇಟ್ಲಿ ಅಂತ್ಯ ಸಂಸ್ಕಾರ ನೆರವೇರಿದ್ದು, ಪುತ್ರ ರೋಹನ್ ಜೇಟ್ಲಿ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

Add Asianetnews Kannada as a Preferred SourcegooglePreferred
Scroll to load tweet…

ಈ ವೇಳೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ಯೋಗಗುರು ಬಾಬಾ ರಾಮ್’ದೇವ್, ಪ್ರತಿಪಕ್ಷಗಳ ನಾಯಕರು ಹಾಗೂ ದೇಶ-ವಿದೇಶಗಳ ಗಣ್ಯರು ಹಾಜರಿದ್ದರು.

Scroll to load tweet…

ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ತ್ರಿರಾಷ್ಟ್ರ ಪ್ರವಾಸದಲ್ಲಿದ್ದು, ಜೇಟ್ಲಿ ಅಂತ್ಯ ಸಂಸ್ಕಾರಕ್ಕೆ ಬರಲಾಗಲಿಲ್ಲ. ವಿದೇಶ ಪ್ರವಾಸ ಮೊಟಕುಗೊಳಿಸದಂತೆ ಜೇಟ್ಲಿ ಕುಟುಂಬ ನಿನ್ನೆ ಪ್ರಧಾನಿ ಮೋದಿ ಅವರಲ್ಲಿ ಮನವಿ ಕೂಡ ಮಾಡಿತ್ತು.

Scroll to load tweet…

ಇದಕ್ಕೂ ಮೊದಲು ಜೇಟ್ಲಿ ನಿವಾಸದಿಂದ ಬಿಜೆಪಿ ಕಚೇರಿಗೆ ಮತ್ತು ಬಿಜೆಪಿ ಕಚೇರಿಯಿಂದ ನಿಗಮ್ ಬೋಧ್ ಘಾಟ್’ವರೆಗೂ ಜೇಟ್ಲಿ ಕಳೆಬರಹದ ಅಂತಿಮ ಯಾತ್ರೆ ನೆರವೇರಿತು. ಈ ವೇಳೆ ಅಗಲಿದ ನಾಯಕನಿಗೆ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದರು.

Scroll to load tweet…

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ, ನಿನ್ನೆ(ಆ.24)ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

Scroll to load tweet…