ವೆಲ್ಕಮ್ ಬ್ಯಾಕ್ ಸರ್: ಸ್ವದೇಶಕ್ಕೆ ಮರಳಿದ ಅರುಣ್ ಜೇಟ್ಲಿ!
ಯಶಸ್ವಿ ಚಿಕಿತ್ಸೆ ಬಳಿಕ ಸ್ವದೇಶಕ್ಕೆ ಮರಳಿದ ಹಣಕಾಸು ಸಚಿವ ಅರುಣ್ ಜೇಟ್ಲಿ| ಅನಾರೋಗ್ಯ ಕಾರಣದಿಂದ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಕೇಂದ್ರ ಸಚಿವ| ಟ್ವೀಟ್ ಮೂಲಕ ಸ್ವದೇಶಕ್ಕೆ ಮರಳಿದ ಸಂತಸ ಹಂಚಿಕೊಂಡ ಅರುಣ್ ಜೇಟ್ಲಿ| ಚಿಕಿತ್ಸೆಗಾಗಿ ಕಳೆದ ಜನವರಿ 15ರಂದು ಅಮೆರಿಕಕ್ಕೆ ತೆರಳಿದ್ದ ಅರುಣ್ ಜೇಟ್ಲಿ| ಮಧ್ಯಂತರ ಬಜೆಟ್ ಮಂಡಿಸಿದ್ದ ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್
ನವದೆಹಲಿ(ಫೆ.09): ಅನಾರೋಗ್ಯ ಕಾರಣದಿಂದ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಇಂದು ಭಾರತಕ್ಕೆ ಮರಳಿದ್ದಾರೆ.
ಈ ಕುರಿತು ಖುದ್ದು ಟ್ವೀಟ್ ಮಾಡಿರುವ ಅರುಣ್ ಜೇಟ್ಲಿ, ಮನೆಗೆ ಮರಳಿರುವುದಕ್ಕೆ ಸಂತೋಷವಾಗಿದೆ ಎಂದು ತಾಯ್ನಾಡಿಗೆ ಮರಳಿದ ಸಂತಸ ಹಂಚಿಕೊಂಡಿದ್ದಾರೆ.
Delighted to be back home.
— Arun Jaitley (@arunjaitley) February 9, 2019
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 66 ವರ್ಷದ ಅರುಣ್ ಜೇಟ್ಲಿ, ಕಳೆದ ವರ್ಷ ಏಪ್ರಿಲ್ ನಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಳೆದ ಜನವರಿ 15ರಂದು ಅಮೆರಿಕಕ್ಕೆ ತೆರಳಿದ್ದರು.
ಅರುಣ್ ಜೇಟ್ಲಿ ಅನುಪಸ್ಥಿತಿಯಲ್ಲಿ ಕಳೆದ ವಾರ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಬಜೆಟ್ ಮಂಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.