ಬಿಜೆಪಿ ಅಧ್ಯಕ್ಷ ಅಮಿತ್‌ ಶಾರ ಮಗ ಸೇರಿದಂತೆ ಹಲವು ಸಚಿವರುಗಳ ಭ್ರಷ್ಟಾಚಾರದ ವಿಷಯದ ಬಗ್ಗೆ ನಾವು ಗಮನ ಸೆಳೆಯುತ್ತಿದ್ದರೂ, ಈ ವಿಷಯಗಳಲ್ಲಿ ಮೋದಿ ಯಾವಾಗಲೂ ಮೌನ ಕಾಪಾಡಿಕೊಂಡು ಬಂದಿದ್ದಾರೆ ಎಂದು  ಕಾಂಗ್ರೆಸ್ ವಕ್ತಾರ ಆರ್‌.ಪಿ.ಎನ್‌. ಸಿಂಗ್‌ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಅನ್ನು ಬೇಲ್‌ (ಜಾಮೀನು) ಗಾಡಿಗೆ ಹೋಲಿಸಿ ವ್ಯಂಗ್ಯವಾಡಿದ ಬೆನ್ನಲ್ಲೇ, ತಿರುಗೇಟು ನೀಡಿರುವ ಕಾಂಗ್ರೆಸ್‌, ಭ್ರಷ್ಟಾಚಾರಿ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿ ರಕ್ಷಿಸುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಕೂಡಲೇ ಈ ಎಲ್ಲಾ ಭ್ರಷ್ಟ ಬಿಜೆಪಿ ನಾಯಕರು ಜೈಲು ಸೇರುವುದು ಖಚಿತ ಎಂದು ಹೇಳಿದೆ. 

ಬಿಜೆಪಿ ಅಧ್ಯಕ್ಷ ಅಮಿತ್‌ ಶಾರ ಮಗ ಸೇರಿದಂತೆ ಹಲವು ಸಚಿವರುಗಳ ಭ್ರಷ್ಟಾಚಾರದ ವಿಷಯದ ಬಗ್ಗೆ ನಾವು ಗಮನ ಸೆಳೆಯುತ್ತಿದ್ದರೂ, ಈ ವಿಷಯಗಳಲ್ಲಿ ಮೋದಿ ಯಾವಾಗಲೂ ಮೌನ ಕಾಪಾಡಿಕೊಂಡು ಬಂದಿದ್ದಾರೆ ಎಂದು ಪಕ್ಷದ ವಕ್ತಾರ ಆರ್‌.ಪಿ.ಎನ್‌. ಸಿಂಗ್‌ ಹೇಳಿದ್ದಾರೆ.