ಕುರೇಂಗಿನಿ ಬೆಟ್ಟದಲ್ಲಿ ಕಾಡ್ಗಿಚ್ಚು; 20 ವಿದ್ಯಾರ್ಥಿಗಳು ಸಿಲುಕಿರುವ ಶಂಕೆ
ಥೇನಿ ಜಿಲ್ಲೆಯ ಕುರೇಂಗಿನಿ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು 20 ವಿದ್ಯಾರ್ಥಿಗಳು ಕಾಡಿನಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ನವದೆಹಲಿ (ಮಾ.11): ಥೇನಿ ಜಿಲ್ಲೆಯ ಕುರೇಂಗಿನಿ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು 20 ವಿದ್ಯಾರ್ಥಿಗಳು ಕಾಡಿನಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಎಡಪ್ಪಾಡಿ ಪಲನೀಸ್ವಾಮಿ ವಿನಂತಿ ಮೇರೆಗೆ ವಿದ್ಯಾರ್ಥಿಗಳ ರಕ್ಷಣೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ರಕ್ಷಣಾ ದಳವನ್ನು ಕಳುಹಿಸಿದ್ದಾರೆ. ಅಗ್ನಿಶಾಮಕ ದಳ ಹಾಗೂ ಆ್ಯಂಬುಲೆನ್ಸ್ ಸ್ಥಳಕ್ಕೆ ಧಾವಿಸಿದೆ. ಡಿಸಿಎಂ ಪನ್ನೀರ್ ಸೆಲ್ವಂ ಕೂಡಾ ಸ್ಥಳಕ್ಕೆ ಧಾವಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಾಯಲಾಗಿದೆ.