ಅಥಣಿಯಲ್ಲಿ ಕಾಂಗ್ರೆಸ್‌ನಿಂದ ಸ್ಥಳೀಯ, ಜಿಲ್ಲಾ ನಾಯಕರು ಸ್ಪರ್ಧಿಸಲಿ ಅಥವಾ ರಾಜ್ಯ ನಾಯಕರನ್ನೇ ಕರೆತಂದು ಸ್ಪರ್ಧೆಗಿಳಿಸಲಿ. ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೂ ಸ್ವಾಗತಿಸಿ, ಅದನ್ನು ಸವಾಲಾಗಿ ಸ್ವೀಕರಿಸುತ್ತೇನೆ ಎಂದರು.

ಅಥಣಿ: ಹಲವಾರು ವರ್ಷಗಳಿಂದ ಜನಪರ ಕಾರ್ಯಗಳಿಂದ ಅಥಣಿಯನ್ನು ಬಿಜೆಪಿ ಭದ್ರಕೋಟೆಯನ್ನಾಗಿಸಿದ್ದೇವೆ. ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಷ್ಟೇ ಅಲ್ಲ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರೇ ಸ್ಪರ್ಧಿಸಿದರೂ ಹೆದರುವುದಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

Add Asianetnews Kannada as a Preferred SourcegooglePreferred

ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಶನಿವಾರ ನಾನಾ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಮುಂದಿನ ಚುನಾವಣೆಗೆ ಅಥಣಿಯಲ್ಲಿ ಕಾಂಗ್ರೆಸ್‌ನಿಂದ ಸ್ಥಳೀಯ, ಜಿಲ್ಲಾ ನಾಯಕರು ಸ್ಪರ್ಧಿಸಲಿ ಅಥವಾ ರಾಜ್ಯ ನಾಯಕರನ್ನೇ ಕರೆತಂದು ಸ್ಪರ್ಧೆಗಿಳಿಸಲಿ. ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೂ ಸ್ವಾಗತಿಸಿ, ಅದನ್ನು ಸವಾಲಾಗಿ ಸ್ವೀಕರಿಸುತ್ತೇನೆ ಎಂದರು.

ಕನ್ನಡಪ್ರಭ ವಾರ್ತೆ
epaper.kannadaprabha.in

(ಲಕ್ಷ್ಮಣ್ ಸವದಿಯವರ ಸಂಗ್ರಹ ಚಿತ್ರ)