ಅಯೋಧ್ಯೆಯಲ್ಲಿಂದು ಮರ್ಯಾದ ಪುರುಷೋತ್ತಮನ ದರ್ಶನಕ್ಕೆ ತೆರಳಿದ್ದ ಯಾತ್ರಾರ್ಥಿಗಳ ನಡುವೆ ನೂಕು ನುಗ್ಗಲು ಉಂಟಾಗಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.  

ನವದೆಹಲಿ (ಏ.05): ಅಯೋಧ್ಯೆಯಲ್ಲಿಂದು ಮರ್ಯಾದ ಪುರುಷೋತ್ತಮನ ದರ್ಶನಕ್ಕೆ ತೆರಳಿದ್ದ ಯಾತ್ರಾರ್ಥಿಗಳ ನಡುವೆ ನೂಕು ನುಗ್ಗಲು ಉಂಟಾಗಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನದಿಯಲ್ಲಿ ಸ್ನಾನ ಮುಗಿಸಿ ಶ್ರೀರಾಮನ ದರ್ಶನಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಪರಿಸ್ಥಿತಿ ಅರಿತ ಪೊಲೀಸರು ಬ್ಯಾರಿಕೇಡ್​ಗಳನ್ನ ತೆಗೆದು ಯಾತ್ರಾರ್ಥಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.. ಸುಮಾರು 20 ಲಕ್ಷ ಯಾತ್ರಾರ್ಥಿಗಳು ದರ್ಶನಕ್ಕೆ ಏಕಕಾಲಕ್ಕೆ ತೆರಳಿದ್ದರಿಂದ ಭಾರೀ ನೂಕು ನುಗ್ಗಲು ಉಂಟಾಗಿದೆ.