Asianet Suvarna News Asianet Suvarna News

ಇರುಮುಡಿ ಕಟ್ಟುವಾಗಲೇ ಗುರುಸ್ವಾಮಿ ನಿಧನ

ಇರುಮುಡಿ ಕಟ್ಟುತ್ತಿದ್ದ ವೇಳೆಯೇ ಗುರುಸ್ವಾಮಿ ಓರ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಲಾದಲ್ಲಿ ನಡೆದಿದೆ. 

Ayyappa Devotee Guruswamy Death Due Heart Attack In Ullala
Author
Bengaluru, First Published Jan 8, 2019, 10:43 AM IST

ಉಳ್ಳಾಲ: ಶಬರಿಮಲೆ ಯಾತ್ರೆ ಕೈಗೊಳ್ಳಲಿದ್ದ ಗುರುಸ್ವಾಮಿಯೊಬ್ಬರು ಇರುಮುಡಿ ಕಟ್ಟುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಇರಾ ಮೂಳೂರಿನಲ್ಲಿ ಸೋಮವಾರ ಮುಂಜಾನೆ ನಡೆದಿದೆ. 

ಮೂಳೂರು ನಿವಾಸಿ ಸುರೇಶ್‌ ಗುರುಸ್ವಾಮಿ (56) ಮೃತಪಟ್ಟವರು. ಈ ಸಲ ಸುರೇಶ್‌ ಗುರುಸ್ವಾಮಿ ಅವರು 17ನೇ ಬಾರಿ ಶಬರಿಮಲೆ ಯಾತ್ರೆಗೆ ಹೋಗುವವರಿದ್ದರು. ಆ ಪ್ರಯುಕ್ತ ಸೋಮವಾರ ತಮ್ಮ ಊರಿನ 22 ಮಂದಿ ವ್ರತಧಾರಿಗಳ ಜೊತೆಗೆ ತೆರಳುವವರಿದ್ದರು. 

ಶಬರಿಮಲೆ ದೇಗುಲದ ಅಶ್ವತ್ಥ ಮರಕ್ಕೆ ಬೆಂಕಿ!

ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಸಹಸ್ರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅನ್ನದಾನ ಆಯೋಜಿಸಲಾಗಿತ್ತು. ಆದರೆ ಸುರೇಶ್‌ ಗುರುಸ್ವಾಮಿ ಇರುಮುಡಿ ಕಟ್ಟುವ ಸಂದರ್ಭದಲ್ಲೇ ಹೃದಯಘಾತಕ್ಕೆ ಒಳಗಾಗಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. 

ಶಬರಿಗೆಮಲೆಗೆ ಮೂರಲ್ಲ 10 ಮಹಿಳೆಯರ ಪ್ರವೇಶ!

ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಸದಾ ಅಯ್ಯಪ್ಪನ ಧ್ಯಾನದಲ್ಲೇ ಇರುತ್ತಿದ್ದ ಅವರು ಇತ್ತೀಚೆಗೆ, ಸಂಪ್ರದಾಯ ಮುರಿದು ಮಹಿಳೆಯರು ಪ್ರವೇಶಿಸಿರುವ ವಿಚಾರವಾಗಿ ಸ್ನೇಹಿತರಲ್ಲಿ ಬೇಸರ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

Follow Us:
Download App:
  • android
  • ios