Asianet Suvarna News Asianet Suvarna News

ಸಮಾಜವಾದಿ ಅಲ್ಲ, ನಮಾಜ್‌ವಾದಿ ಪಕ್ಷ: ಅಮರ್ ಸಿಂಗ್ ಕಿಡಿ!

ಸಮಾಜವಾದಿ ಪಕ್ಷದ ಹೆಸರು ಬದಲಿಸಿದ ಅಮರ್ ಸಿಂಗ್! ಪಕ್ಷ ನಮಾಜ್‌ವಾದಿಗಳ ಕೈಯಲ್ಲಿದೆ ಎಂದ ಅಮರ್ ಸಿಂಗ್! ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ! ಸ್ವಪಕ್ಷೀಯರ ವಿರುದ್ಧವೇ ತಿರುಗಿ ಬಿದ್ದ ಅಮರ್ ಸಿಂಗ್! ಮುಜಫರ್ ಕೋಮುಗಲಭೆಗೆ ಅಜಂ ಖಾನ್ ಹೊಣೆ 
 

Azam Khan responsible for Muzaffarnagar riots: Amar Singh
Author
Bengaluru, First Published Aug 28, 2018, 3:40 PM IST

ಲಕ್ನೋ(ಆ.28): 2013 ರಲ್ಲಿ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದ ಗಲಭೆಗೆ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಅವರೇ ಹೊಣೆ ಎಂದು ರಾಜ್ಯಸಭೆ ಸಂಸದ ಅಮರ್ ಸಿಂಗ್ ಆರೋಪಿಸಿದ್ದಾರೆ.

2019ರಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ತಾವು ಬಿಜೆಪಿಗೆ ಬೆಂಬಲ ನೀಡುವುದಾಗಿ ಅಮರ್ ಸಿಂಗ್ ಘೋಷಿಸಿದ್ದಾರೆ. ಮುಲಾಯಂ ಸಿಂಗ್ ಯಾದವ್ ಅವರಂತ ರಾಜಕಾರಣಿಗಳು ಅಜಂ ಖಾನ್ ಅವರಂತ ನಾಯಕರನ್ನು ರೂಪಿಸುತ್ತಾರೆ. ಈ ಕಾರಣದಿಂದ  2013 ರಲ್ಲಿ ನಡೆದಂತ ಘಟನೆಗಳು ನಡೆಯುತ್ತವೆ ಎಂದು ಅಮರ್ ಸಿಂಗ್ ಟೀಕಿಸಿದ್ದಾರೆ.

ಮುಜಾಫರ್ ನಗರ ಗಲಭೆ ಉತ್ತುಂಗದಲ್ಲಿದ್ದಾಗ, ಸಮಾಜವಾದಿ ಪಕ್ಷದ ನಾಯಕರು ಸಾಯ್ ಪೈ ಮಹೋತ್ಸವ ಎಂಜಾಯ್ ಮಾಡುತ್ತಿದ್ದರು ಎಂದು ಮರ್ ಸಿಂಗ್ ಆರೋಪಿಸಿದ್ದಾರೆ.

ಅಮರ್ ಸಿಂಗ್ ಅವರನ್ನು ಸಾರ್ವಜನಿಕವಾಗಿ ಹತ್ಯೆ ಮಾಡಬೇಕು ಹಾಗೂ ಅವರ ಹೆಂಡತಿ ಮತ್ತು ಮಗಳಿಗೆ ಆ್ಯಿಸಿಡ್ ಹಾಕಬೇಕು ಎಂದು  ಸಂದರ್ಶನವೊಂದರಲ್ಲಿ ಅಜಂಖಾನ್ ಬೆದರಿಕೆ ಹಾಕಿದ್ದರು. ಹೀಗಾಗಿ  ನನ್ನ ಮಗಳು ಶಾಲೆಗೆ ಹೋಗಲು ಹೆದರುತ್ತಿದ್ದಾಳೆ ಎಂದು  ಸುದ್ದಿಗೋಷ್ಠಿಯಲ್ಲಿ ಅಮರ್ ಸಿಂಗ್ ಹೇಳಿದ್ದಾರೆ.

ಸಮಾಜವಾದಿ  ಪಕ್ಷ ನಮಾಜ್ ವಾದಿಯಾಗುತ್ತಿದೆ ಎಂದು ಅಮರ್ ಸಿಂಗ್  ಲೇವಡಿ ಮಾಡಿದ್ದಾರೆ. ಗುಜರಾತ್ ನಲ್ಲ ನಡೆದರೇ ಅದು ಗಲಭೆಯಾಗುತ್ತದೆ ಎಂದಾದರೇ ಉತ್ತರ ಪ್ರದೇಶದಲ್ಲಿ ನಡೆದದ್ದು ಗಲಭೆಯಲ್ಲವೇ ಎಂದು ಪ್ರಶ್ನಸಿದ್ದಾರೆ.

Follow Us:
Download App:
  • android
  • ios