ಮೈಸೂರಿನಲ್ಲಿ ಹೊಸ ಮನೆ ಗೃಹಪ್ರವೇಶ ಮಾಡಿದ ವಿಜಯೇಂದ್ರ
ಬಿಎಸ್'ವೈ ಪುತ್ರ ಬಿ.ವೈ ವಿಜಯೇಂದ್ರ ಒಂದು ತಿಂಗಳ ಮಟ್ಟಿಗೆ ಬಾಡಿಗೆ ಮನೆ ಪಡೆದಿದ್ದಾರೆ.
ಮೈಸೂರು(ಏ.13): ವರುಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಕುಟುಂಬ ಸಮೇತರಾಗಿ ವರುಣ ಗ್ರಾಮದಲ್ಲಿ ನೂತನ ಗೃಹ ಪ್ರವೇಶ ಮಾಡಿದ್ದಾರೆ.
ಪತ್ನಿ ಪ್ರೇಮ ಜತೆ ಹೋಮ-ಹವನ ಪೂಜೆ ನೆರವೇರಿಸಿದ ವಿಜಯೇಂದ್ರ ನೂತನ ಗೃಹ ಪ್ರವೇಶ ಮಾಡಿದ್ದಾರೆ. ಕುಲದೇವ ಯಡಿಯೂರು ಸಿದ್ದಲಿಂಗೇಶ್ವರ, ಉಮಾ ಮಹೇಶ್ವರಿ, ಕ್ಷೇತ್ರದ ಅಧಿದೇವ ಬಸವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು. ಜೊತೆಗೆ ತಾಯಿ ಮೈತ್ರಿದೇವಿ ಭಾವಚಿತ್ರವಿಟ್ಟು ಮಾತೃಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
ಬಿಎಸ್'ವೈ ಪುತ್ರ ಬಿ.ವೈ ವಿಜಯೇಂದ್ರ ಒಂದು ತಿಂಗಳ ಮಟ್ಟಿಗೆ ಬಾಡಿಗೆ ಮನೆ ಪಡೆದಿದ್ದಾರೆ.