ಪ್ರಧಾನಿ ನರೇಂದ್ರ ಮೋದಿ ಆಪ್ತರಾಗಿರುವ  ಯೋಗಿ ಬಾಬಾ ರಾಮದೇವ್ ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮವು 3ರಿಂದ 5 ಲಕ್ಷ ಕೋಟಿ ರೂಪಾಯಿಯ ಹಗರಣವಾಗಿದೆಯೆಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಪ್ತರಾಗಿರುವ ಯೋಗಿ ಬಾಬಾ ರಾಮದೇವ್ ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮವು 3ರಿಂದ 5 ಲಕ್ಷ ಕೋಟಿ ರೂಪಾಯಿಯ ಹಗರಣವಾಗಿದೆಯೆಂದು ಹೇಳಿದ್ದಾರೆ. ಭ್ರಷ್ಟ ಬ್ಯಾಂಕು ಅಧಿಕಾರಿಗಳು ನೋಟು ನಿಷೇಧ ಕ್ರಮದಿಂದಾಗಿ 3 ರಿಂದ 5 ಲಕ್ಷ ಕೋಟಿಯಷ್ಟು ಹಗರಣ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ. ಇದರಲ್ಲಿ ರಿಸರ್ವ್ ಬ್ಯಾಂಕು ಅಧಿಕಾರಿಗಳು ಶಾಮಿಲಾಗಿರುವ ಸಾಧ್ಯತೆಗಳಿವೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ದಿ ಕ್ವಿಂಟ್’ಗೆ ನೀಡಿರುವ ಸಂದರ್ಶನದಲ್ಲಿ ರಾಮದೇವ್ ನೋಟು ನಿಷೇಧ ಕ್ರಮವನ್ನು ಜಾರಿಗೊಳಿಸಿರುವ ರೀತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.