Asianet Suvarna News Asianet Suvarna News

ಉಸಿರುಗಟ್ಟಿಸಿ 2 ವರ್ಷದ ಮಗುವಿನ ಕೊಲೆ

ಎರಡು ವರ್ಷದ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Baby Murder In Bengaluru

ಬೆಂಗಳೂರು :  ಎರಡು ವರ್ಷದ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಸವರಾಜು ಹಾಗೂ ವೆಂಕಮ್ಮ ದಂಪತಿಯ ಮಗು ವೆಂಕಟೇಶನನ್ನು ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಈರಣ್ಣ ಎಂಬಾತ ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ.

 2 ದಿನಗಳ ಹಿಂದೆಯಷ್ಟೇ ಈರಣ್ಣ ಹಾಗೂ ಬಸವರಾಜು ಕುಟುಂಬಕ್ಕೆ ನಾಯಿಗೆ ಹಾಲು ಹಾಕುವ ಬಟ್ಟಲಿನ ವಿಚಾರವಾಗಿ ಜಗಳ ನಡೆದಿತ್ತು. ಈ ಜಗಳದ ಹಿನ್ನೆಲೆಯಲ್ಲಿಯೇ ಕೊಲೆ ಮಾಡಿರಬಹುದು ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ. ಮಗುವಿನ ಕುತ್ತಿಗೆಯನ್ನು ತುಳಿದು ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us:
Download App:
  • android
  • ios