ಬೆಂಗಳೂರು ಉಪಮೇಯರ್ ರಮೀಳಾ ಇನ್ನಿಲ್ಲ
ಬೆಂಗಳೂರು ಉಪ ಮೇಯರ್ ರಮೀಳಾ ಉಮಾಶಂಕರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು : ಕಳೆದ 8 ದಿನಗಳ ಹಿಂದಷ್ಟೇ ಬೆಂಗಳೂರು ಉಪಮೇಯರ್ ಆಗಿ ಆಯ್ಕೆ ಆಗಿದ್ದ ರಮೀಳಾ ಉಮಾಶಂಕರ್ [44] ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಕಳೆದ ರಾತ್ರಿ 12.45ರ ಸುಮಾರಿಗೆ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಧಿಕಾರ ಸ್ವೀಕಾರ ಮಾಡಿ 8ನೇ ದಿನಕ್ಕೆ ವಿಧಿ ಅಟ್ಟಹಾಸ ಮೆರೆದಿದ್ದು, ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.
"
ಕಾವೇರಿ ಪುರ ವಾರ್ಡ್ ಕಾರ್ಪೊರೇಟರ್ ಆಗಿದ್ದ ಅವರು ಕಳೆದ ಸೆಪ್ಟೆಂಬರ್ 28ರಂದು ಜೆಡಿಎಸ್ ನಿಂದ ಸಮ್ಮಿಶ್ರ ಸರ್ಕಾರದಲ್ಲಿ ಉಪ ಮೇಯರ್ ಆಗಿದ್ದರು.
ಉಪಮೇಯರ್ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ಅನೇಕ ಮುಖಂಡರು ಸಂತಾಪ ಸೂಚಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.