ನವದೆಹಲಿ(ಸೆ.29): ಸೇನಾ ದಾಳಿಗೆ ಬೆಂಬಲ ನೀಡಿರುವ ಬಾಂಗ್ಲಾದೇಶ, ತನ್ನ ಸಾರ್ವಭೌಮತ್ವ ಹಾಗೂ ಪ್ರದೇಶದ ಮೇಲೆ ದಾಳಿ ನಡೆದರೆ ಪ್ರತಿಯಾಗಿ ದಾಳಿ ನಡೆಸುವ ಹಕ್ಕು ಇದೆ ಅಂತ ಬಾಂಗ್ಲಾ ಪ್ರಧಾನಿ ಸಲಹೆಗಾರ ಇಖ್ಬಾಲ್ ಚೌಧರಿ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಮತ್ತೊಂದು ಕಡೆ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಪಾಕಿಸ್ತಾನ ಉಗ್ರರ ಶಿಬಿರಗಳ ಮೇಲೆ ನಡೆಸಿದ ಸೀಮಿತ ದಾಳಿಯ ಬಗ್ಗೆ 30 ದೇಶಗಳ ರಾಯಭಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ ಭಾರತದ ರಾಯಬಾರಿಗೆ ಪಾಕ್​ ವಿದೇಶಾಂಗ ಇಲಾಖೆ ಸಮನ್ಸ್ ನೀಡಿದೆ.​

ಧ್ವಜಗೌರವ ಕಾರ್ಯಕ್ರಮವನ್ನು ರದ್ದು :ಗಡಿಯಲ್ಲಿ ಪರಿಸ್ಥಿತಿ ಉದ್ವಿಘ್ನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ದಾನದ ಗಡಿ ವಾಘಾದಲ್ಲಿ ಎಂದಿನಂತೆ ನಡೆಯಬೇಕಿದ್ದ ಉಭಯ ದೇಶಗಳ ಸೈನಿಕರ ಧ್ವಜಗೌರವ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.

ಮುಂಜಾಗ್ರತಾ ಕ್ರಮವಾಗಿ ಪಾಕ್​ ಗಡಿಯಲ್ಲಿ ಹೈ ಅಲರ್ಟ್ : ಭಾರತೀಯ ಸೇನೆ ತಡರಾತ್ರಿ ಪಾಕಿಸ್ತಾನ ಉಗ್ರರ ಶಿಬಿರಗಳ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಸಂಭವನೀಯ ದಾಳಿ ನಡೆಸಲು ಪ್ಲಾನ್​ ಮಾಡಿಕೊಂಡಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಗಡಿ ವ್ಯಾಪ್ತಿಯ 10 ಕಿ. ಮಿ. ವ್ಯಾಪ್ತಿಯಲ್ಲಿ ಎಲ್ಲಾ ಹಳ್ಳಿಗಳನ್ನು ಸ್ಥಳಾಂತರಗೊಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚುವರಿ ಸೇನಾಪಡೆ ನಿಯೋಜನೆ : ದಾಳಿ ಹಿನ್ನೆಲೆಯಲ್ಲಿ ಉಭಯ ದೇಶಗಳ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಇಂಡೋ-ಪಾಕ್ ಗಡಿಗೆ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.