ಕುಡಿದ ಮತ್ತಿನಲ್ಲಿ ಬಾರ್ ಮಾಲಿಕನ ಮಗನ ಮೇಲೆ ಪುಂಡರ ಹಲ್ಲೆ
ಬಾರ್ ನಲ್ಲಿ ಕುಡಿದು ಮಟಮಟ ಮಧ್ಯಾಹ್ನ ಕುಡಿದ ಮತ್ತಿನಲ್ಲಿ ಪುಂಡರು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನೆಲಮಂಗಲ ತಾಲೂಕಿನ ಡಾಬಸ್ಪೇಟೆಯ ಸಂದ್ಯಾಶ್ರೀ ಬಾರ್ ನಲ್ಲಿ ಈ ಘಟನೆ ನಡೆದಿದೆ. ನಾಲ್ಕು ಜನ ಯವಕರು ಬಾರ್ ಮಾಲೀಕನ ಮಗನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ.
ನೆಲಮಂಗಲ (ಜೂ. 21): ಬಾರ್ ನಲ್ಲಿ ಕುಡಿದು ಮಟಮಟ ಮಧ್ಯಾಹ್ನ ಕುಡಿದ ಮತ್ತಿನಲ್ಲಿ ಪುಂಡರು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನೆಲಮಂಗಲ ತಾಲೂಕಿನ ಡಾಬಸ್ಪೇಟೆಯ ಸಂದ್ಯಾಶ್ರೀ ಬಾರ್ ನಲ್ಲಿ ಈ ಘಟನೆ ನಡೆದಿದೆ.
ನಾಲ್ಕು ಜನ ಯವಕರು ಬಾರ್ ಮಾಲೀಕನ ಮಗನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ. ಮಧ್ಯದ ನಿಗದಿತ ದರಕ್ಕಿಂತ ಹೆಚ್ಚು ಹಣ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆ ನಡೆಸಿರುವ ದೃಶ್ಯ ಬಾರ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಡಾಬಸ್ಪೇಟೆಯ ಜಯರಾಮ್ ಎನ್ನುವವರಿಗೆ ಈ ಬಾರ್ ಸೇರಿದೆ. ದಾಂದಲೆ ಮಾಡಿದ ಯುವಕರಿಗೆ ಪ್ರಭಾವಿ ರಾಜಕಾರಣಿಗಳ ಶ್ರೀರಕ್ಷೆಯಿದೆ ಎನ್ನಲಾಗಿದ್ದು ಈ ಕಾರಣಕ್ಕೆ ರಾಜಕೀಯ ಮುಖಂಡರ ನೇತೃತ್ವದಲ್ಲಿ ಪೊಲೀಸರು ರಾಜಿ-ಸಂಧಾನ ಮಾಡಿದ್ದಾರೆ.
ಹಲ್ಲೆ ನಡೆಸಿದ್ದರೂ ಡಾಬಸ್ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೇ ಪುಂಡರ ಪರ ನಿಂತಿದ್ದಾರೆ ಎಂದು ಬಾರ್ ಮಾಲಿಕ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಎಲ್ಲಾ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.