ಸಚಿವ ಸ್ಥಾನ ಕೈತಪ್ಪಿದರ ಬಗ್ಗೆ ಬೇಸರವಾಗಿದೆ ಆದರೆ ಕೈಕಟ್ಟಿ ಕುಳಿತುಕೊಳ್ಳುವ ಸಭಾಪತಿ ಸ್ಥಾನ ನನಗೆ ಬೇಕಿಲ್ಲ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ. ಬಸವರಾಜ್ ಹೊರಟ್ಟಿ ಏನು ಹೇಳಿದರು ಮುಂದೆ ಓದಿ..

ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದರ ಬಗ್ಗೆ ಬೇಸರವಾಗಿದೆ ಆದರೆ ಕೈಕಟ್ಟಿ ಕುಳಿತುಕೊಳ್ಳುವ ಸಭಾಪತಿ ಸ್ಥಾನ ನನಗೆ ಬೇಕಿಲ್ಲ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ. 

Add Asianetnews Kannada as a Preferred SourcegooglePreferred

ದೇವೇಗೌಡರು ನನಗೆ ಸಭಾಪತಿ ಹುದ್ದೆನೀಡುವ ಬಗ್ಗೆ ಕಾರ್ಯಕರ್ತರ ಎದುರು ಹೇಳಿಕೊಂಡಿದ್ದಾರೆಯೇ ವಿನಃ ನನ್ನ ಮುಂದೆ ಹೇಳಿಲ್ಲ ಇದನ್ನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆ ಬಹಳಷ್ಟಿವೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವನಾಗುವ ಬಯಕೆ ಹೊಂದಿದ್ದೆ ಎಂದು ಹೇಳಿದರು.

 ಹಲವು ವರ್ಷಗಳಿಂದ ಶಿಕ್ಷಕರು ನನ್ನನ್ನು ಆಯ್ಕೆಮಾಡುತ್ತಿದ್ದು, 38 ವರ್ಷಗಳಿಂದ ಜೆಡಿಎಸ್‍ನಲ್ಲಿದ್ದೇನೆ. ಈ ಹಿಂದೆ ಸಚಿವನಾಗಿಯೂ ಕೆಲಸಮಾಡಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆಯಿಲ್ಲ ಆದರೂ ಸಚಿವ ಸ್ಥಾನ ತಪ್ಪಿದೆ ಎಂದರು.

ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚನೆಯಾದ ನಂತರ ಶಾಸಕರ ಬಂಡಾಯ ಮುಂದುವರಿಯುತ್ತಲೇ ಇದೆ. ಎರಡೂ ಪಕ್ಷದಲ್ಲಿಯೂ ಸಚಿವ ಸ್ಥಾನ ವಂಚಿತರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ.