Asianet Suvarna News Asianet Suvarna News

ಮಧ್ಯಂತರ ಚುನಾವಣೆಗೆ ಸಜ್ಜಾಗಲು ಸಿದ್ದರಾಮಯ್ಯ ಕರೆ!

ಮಧ್ಯಂತರ ಚುನಾವಣೆಗೆ ಸಜ್ಜಾಗಲು ಸಿದ್ದು ಕರೆ| ಸಂಘಟನೆಗೆ ಒತ್ತು ಕೊಡಲು ಕಾರ್ಯಕರ್ತರಿಗೆ ಸೂಚನೆ

Be Ready For interim Election Says Siddaramaiah To Congress Leaders
Author
Bangalore, First Published Aug 26, 2019, 8:48 AM IST

ಮೈಸೂರು[ಆ.26]: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಧ್ಯಂತರ ಚುನಾವಣೆ ಬಂದರೆ ಎದುರಿಸಲು ಸಜ್ಜಾಗುವಂತೆ ಪಕ್ಷದ ಮುಖಂಡರಿಗೆ ಸೂಚನೆ ನೀಡಿದ್ದಾರೆ.

ಮೈಸೂರಿನ ತಮ್ಮ ನಿವಾಸದಲ್ಲಿ ಚಾಮುಂಡೇಶ್ವರಿ ಹಾಗೂ ವರುಣ ಕ್ಷೇತ್ರದ ಕಾಂಗ್ರೆಸ್‌ ಮುಖಂಡರ ಜೊತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಇಂದಿನ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಎದುರಾಗಬಹುದು ಎಂದ ಅವರು, ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಗಮನ ನೀಡಿ ಎಂದು ಸಲಹೆ ನೀಡಿದರು.

ಈಗಾಗಲೇ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರ ಪತನದ ಬಳಿಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟ ಹಂಚಿಕೆಯ ಬೆನ್ನಲ್ಲೇ ಭಿನ್ನಾಭಿಪ್ರಾಯ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಯಾವಾಗ ಬೇಕಾದರೂ ಚುನಾವಣೆ ಬರಬಹುದು. ಇದನ್ನೇ ರಾಜಕೀಯ ವಿಶ್ಲೇಷಕರೂ ತಮ್ಮ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಪಕ್ಷದ ಮುಖಂಡರು ಸಂಘಟನೆಗೆ ಹೆಚ್ಚು ಒತ್ತು ನೀಡಬೇಕೆಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್‌, ಎಐಸಿಸಿ ವಕ್ತಾರೆ ಐಶ್ವರ್ಯ ಮಹದೇವ್‌ ಮತ್ತಿತರರು ಇದ್ದರು.

Follow Us:
Download App:
  • android
  • ios