ಪಾಳು ಬಾವಿಗೆ ಬಿದ್ದು ಕರಡಿ ಮರಿ ಸಾವು
ನಾಲ್ಕು ವರ್ಷದ ಕರಡಿಯೊಂದು ಪಾಳು ಬಾವಿಗೆ ಬಿದ್ದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬೆಳ್ಳಿಬಟ್ಟಲು ಗ್ರಾಮದಲ್ಲಿ ಮಂಗಳವಾರ ನಡೆದಿದ್ದು ಅರಿವಳಿಕೆ ಮದ್ದಿನ ಕೊರತೆಯಿಂದಾಗಿ ಮೇಲೆತ್ತುವ ಕಾರ್ಯ ವಿಳಂಬವಾಗಿದೆ.
ಪಾವಗಡ (ಜ.31): ನಾಲ್ಕು ವರ್ಷದ ಕರಡಿಯೊಂದು ಪಾಳು ಬಾವಿಗೆ ಬಿದ್ದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬೆಳ್ಳಿಬಟ್ಟಲು ಗ್ರಾಮದಲ್ಲಿ ಮಂಗಳವಾರ ನಡೆದಿದ್ದು ಅರಿವಳಿಕೆ ಮದ್ದಿನ ಕೊರತೆಯಿಂದಾಗಿ ಮೇಲೆತ್ತುವ ಕಾರ್ಯ ವಿಳಂಬವಾಗಿದೆ.
ರಾತ್ರಿ 12 ರ ಸುಮಾರಿನಲ್ಲಿ ಆಹಾರ ಅರಸಿ ಬಂದ ಕರಡಿ ಗ್ರಾಮದ ಈರಣ್ಣ ಎಂಬವರ ತೋಟದ ಪಾಳು ಬಾವಿಗೆ ಬಿದ್ದಿದೆ. ಮೇಲೆ ಬರಲು ಯತ್ನಿಸಿದೆಯಾದರೂ ಸಫಲವಾಗಿಲ್ಲ. ಅರಿವಳಿಕೆ ಮದ್ದಿನ ಕೊರತೆಯಿಂದ ಕಾರ್ಯಾಚರಣೆಗೆ ವಿಳಂಬವಾಗಿದ್ದು, ಬೆಂಗಳೂರಿನ ಬನ್ನೇರುಘಟ್ಟದ ವಲಯಾರಣ್ಯಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿಲಾಗಿದೆ. ಚುಚ್ಚುಮದ್ದು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.