ಹನುಮ ಜಯಂತಿಯ ದಿನದಂದು ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ರಾಲಿಯಲ್ಲಿ ವಿರುದ್ಧ ಪೊಲೀಸರು ಲಾಠಿ ಚಾರ್ಚ್ ನಡೆಸಿದಕ್ಕೆ ಆಕ್ರೋಶ'ಗೊಂಡಿರುವ ಪಶ್ಚಿಮ ಬಂಗಾಳದ ಯುವ ಮೋರ್ಚಾ ನಾಯಕ ಯೋಗೀಶ್ ವರ್ಶೆನೆಯ್ ಈ ಹೇಳಿಕೆ ನೀಡಿದ್ದಾನೆ.

ಕೋಲ್ಕತ್ತಾ(ಏ.12): ಬಿಜೆಪಿಯ ನಾಯಕನೊಬ್ಬ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತಲೆ ಕಡಿದು ತಂದವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಹೇಳಿರುವ ಮಾತು ಈಗ ವಿವಾದಕ್ಕೀಡಾಗಿದೆ.

Add Asianetnews Kannada as a Preferred SourcegooglePreferred

ಹನುಮ ಜಯಂತಿಯ ದಿನದಂದು ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ರಾಲಿಯಲ್ಲಿ ವಿರುದ್ಧ ಪೊಲೀಸರು ಲಾಠಿ ಚಾರ್ಚ್ ನಡೆಸಿದಕ್ಕೆ ಆಕ್ರೋಶ'ಗೊಂಡಿರುವ ಪಶ್ಚಿಮ ಬಂಗಾಳದ ಯುವ ಮೋರ್ಚಾ ನಾಯಕ ಯೋಗೀಶ್ ವರ್ಶೆನೆಯ್ ಈ ಹೇಳಿಕೆ ನೀಡಿದ್ದಾನೆ.

'ಯಾರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತಲೆ ಕಡಿದು ತರಿತ್ತಾರೋ ಅವರಿಗೆ 11 ಲಕ್ಷ ಬಹುಮಾನ ನೀಡುತ್ತೇನೆ. ಮಮತಾ ಬ್ಯಾನರ್ಜಿ' ಅವರು ಸರಸ್ವತಿ ಪೂಜೆ'ಗೆ ಅವಕಾಶ ನೀಡುವುದಿಲ್ಲ. ರಾಮ ನವಮಿಯ ಸಂಭ್ರಮ ಆಚರಿಸುವುದಕ್ಕೆ ಬಿಡುವುದಿಲ್ಲ. ಅಲ್ಲದೆ ಹನುಮ ಜಯಂತಿಯ ಮೆರವಣಿಗೆ ವೇಳೆಯಲ್ಲಿ ಸಾರ್ವಜನಿಕರ ಮೇಲೆ ನಿರ್ದಯವಾಗಿ ಲಾಠಿ ಚಾರ್ಜ್ ನಡೆಸಿದ್ದಾರೆ. ಇವರು ಸದಾ ಮುಸ್ಲಿಮರಿಗೆ ಸದಾ ಬೆಂಬಲ ನೀಡುತ್ತಾರೆ. ಇಫ್ತಾರ್ ಕೂಟವನ್ನು ಆಯೋಜಿಸುತ್ತಾರೆ'ಎಂದು ಯೋಗೀಶ್ ವರ್ಶೆನೆಯ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾನೆ.

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಳೆದ ಮಮತಾ ಬ್ಯಾನರ್ಜಿ ಆಡಳಿತ ಅಧಿಕಾರಕ್ಕೆ ಬಂದ ನಂತರ ಬಲಪಂಥೀಯ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುತ್ತಿದೆ. ಅಲ್ಲದೆ ಮುಖ್ಯಮಂತ್ರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ'ಎಂದು ಸ್ಥಳೀಯ ಬಿಜೆಪಿ ಮುಖಂಡರ ಆರೋಪ'ವಾಗಿದೆ.