ಬೆಳಗಾವಿ ಕರ್ನಾಟಕದ ಆಕ್ರಮಿತ ಪ್ರದೇಶ: ಉದ್ಧವ್ ಠಾಕ್ರೆ ವಿವಾದಾತ್ಮಕ ಹೇಳಿಕೆ
ಬೆಳಗಾವಿ ಮಹಾರಾಷ್ಟ್ರದ ಅವಿಭಾಜ್ಯ ಅಂಗ. ಬೆಳಗಾವಿ ಕರ್ನಾಟಕದ ಆಕ್ರಮಿತ ಪ್ರದೇಶವಾಗಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ (ನ.23): ಬೆಳಗಾವಿ ಮಹಾರಾಷ್ಟ್ರದ ಅವಿಭಾಜ್ಯ ಅಂಗ. ಬೆಳಗಾವಿ ಕರ್ನಾಟಕದ ಆಕ್ರಮಿತ ಪ್ರದೇಶವಾಗಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯನ್ನು ಮರಳಿ ಪಡೆಯಲು ಹೋರಾಟ ನಡೆಯುತ್ತಿದೆ. ಮಹಾರಾಷ್ಟ್ರ ಶಾಸಕರು, ಸಂಸದರಿಗೆ ಈ ಜವಾಬ್ದಾರಿ ಇದೆ ಎಂದು ಬೆಳಗಾವಿ ಗಡಿಯ ಶಿನ್ನೋಳಿ ಗ್ರಾಮದಲ್ಲಿ ಉದ್ಧವ್ ಠಾಕ್ರೆ ವಿವಾದಾತ್ಮಕ ಮಾತುಗಳನ್ನಾಡಿದ್ದಾರೆ. ಶಿವಸೇನ ವಚನವಿದು. ಇದು ಮರಾಠಿಯ ಭೂಭಾಗ. ಇದನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇನೆ. ನಿಮ್ಮ ಸಮಸ್ಯೆಗಳಿಗೆ ಶಿವಸೇನೆ ಉತ್ತರಿಸುತ್ತದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.