Asianet Suvarna News Asianet Suvarna News

ರಾಜಕೀಯ ಆಟದ ನಡುವೆ ಕಾಂಗ್ರೆಸ್ ಶಾಸಕಗೆ ರಿಲೀಫ್

ರಾಜ್ಯ ರಾಜಕಾರಣದಲ್ಲಿ ಚದುರಂಗದಾಟ ನಡೆಯುತ್ತಿರುವ ಮಧ್ಯೆಯೇ ಕಾಂಗ್ರೆಸ್ ಶಾಸಕರೋರ್ವರಿಗೆ ಬಿಗ್ ರಿಲೀಫ್ ದೊರಕಿದೆ. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್‌ ಸಿಂಗ್‌ ಬಂಧನ ಭೀತಿಯಿಂದ ಪಾರಾಗಿದ್ದಾರೆ.

Belekeri Case Congress Leader Anand Singh Attends Special Court
Author
Bengaluru, First Published Jan 17, 2019, 9:54 AM IST

ಬೆಂಗಳೂರು :  ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್‌ ಸಿಂಗ್‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವ ಮೂಲಕ ಬಂಧನ ಭೀತಿಯಿಂದ ಪಾರಾಗಿದ್ದಾರೆ. 

ಬುಧವಾರ ನ್ಯಾಯಾಲಯಕ್ಕೆ ಹಾಜರಾದ ಆನಂದ್‌ ಸಿಂಗ್‌, ವೈಯಕ್ತಿಕ ಕಾರಣಗಳಿಂದಾಗಿ ವಿಚಾರಣೆಗೆ ಬಂದಿರಲಿಲ್ಲ. ಇನ್ನು ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿಕೆ ನೀಡಿದರು. 

ಶಾಸಕರ ಹೇಳಿಕೆಯನ್ನು ದಾಖಲಿಸಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಯಿತು. ಬೇಲೆಕೇರಿ ಅದಿಕರು ನಾಪತ್ತೆ ಪ್ರಕರಣ ಸಂಬಂಧ ನ್ಯಾಯಾಲಯವು ಆನಂದ್‌ ಸಿಂಗ್‌ ಮತ್ತು ನಾಗೇಂದ್ರ ಅವರಿಗೆ ಹಲವು ಬಾರಿ ನೋಟಿಸ್‌ ಜಾರಿಗೊಳಿಸಿದರೂ ಅವರು ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್‌ ಜಾರಿಗೊಳಿಸಿತ್ತು. 

ಬಳಿಕ ಶಾಸಕ ನಾಗೇಂದ್ರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ, ಆನಂದ್‌ ಸಿಂಗ್‌ ಗೈರಾಗಿದ್ದರು. ಬುಧವಾರ ಹಾಜರಾಗಿ ಬಂಧನ ಭೀತಿಯಿಂದ ಪಾರಾದರು.

Follow Us:
Download App:
  • android
  • ios