Asianet Suvarna News Asianet Suvarna News

ಮಹಾಮಳೆಗೆ ಭೂಕುಸಿತ.. ಪ್ರಯಾಣಿಕರೆ ದಯವಿಟ್ಟು ಗಮನಿಸಿ..

ಬೆಂಗಳೂರು ಮತ್ತು ಮಂಗಳೂರು ಪ್ರಯಾಣಿಕರು ಈ ಸುದ್ದಿಯನ್ನು ಗಮನಿಸಲೇಬೇಕು. ಮಹಾಮಳೆಗೆ ಜಿಲ್ಲೆಯ ಸುಬ್ರಹ್ಮಣ್ಯ-ಸಿರಿಬಾಗಿಲು ಮಧ್ಯೆ ರೈಲ್ವೆ ಹಳಿ ಮೇಲೆ ಭೂಮಿ ಕುಸಿದಿದ್ದು ಭೂಕುಸಿತ ಉಂಟಾದ ಪರಿಣಾಮ ಬೆಂಗಳೂರು-ಮಂಗಳೂರು ಮಧ್ಯೆ ರೈಲು ಸಂಚಾರ ರದ್ದು ಮಾಡಲಾಗಿದೆ.
 

Bengaluru-Mangaluru train service suspended due to landslides

ಮಂಗಳೂರು ಜೂನ್ 14: ಮಹಾಮಳೆಗೆ ಜಿಲ್ಲೆಯ ಸುಬ್ರಹ್ಮಣ್ಯ-ಸಿರಿಬಾಗಿಲು ಮಧ್ಯೆ ರೈಲ್ವೆ ಹಳಿ ಮೇಲೆ ಭೂಮಿ ಕುಸಿದಿದ್ದು ಬೆಂಗಳೂರು-ಮಂಗಳೂರು ಮಧ್ಯೆ ರೈಲು ಸಂಚಾರ ರದ್ದು ಮಾಡಲಾಗಿದೆ.

ಸುಬ್ರಹ್ಮಣ್ಯ-ಸಿರಿಬಾಗಿಲು ಮಧ್ಯಭಾಗದಲ್ಲಿ ಹಠಾತ್ ಭೂಕುಸಿತ ಉಂಟಾಗಿ ರೈಲ್ವೆ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದ ಬೆಳಿಗ್ಗೆ 10.50ಕ್ಕೆ ಮಂಗಳೂರಿನಿಂದ ಹೊರಟಿದ್ದ ಕಾರವಾರ-ಬೆಂಗಳೂರು ರೈಲ್ವೆ ಸುಬ್ರಹ್ಮಣ್ಯವರೆಗೆ ಸಂಚರಿಸಿದ ನಂತರ ಮುಂದಿನ ಪ್ರಯಾಣ ರದ್ದುಗೊಳಿಸಿತು. ಅದೇ ರೀತಿ ಬೆಳಗ್ಗೆ ಬೆಂಗಳೂರಿನಿಂದ ಮಂಗಳೂರಿನತ್ತ ಹೊರಟಿದ್ದ ರೈಲು ಸಕಲೇಶಪುರದನಕ ಬಂದು ಪ್ರಯಾಣ ಮೊಟಕುಗೊಳಿಸಿತು.Bengaluru-Mangaluru train service suspended due to landslides

ಭೂಕುಸಿತದಿಂದ ರೈಲ್ವೆ ಹಳಿಯ ಮೇಲೆ ಮಣ್ಣು ಬಿದ್ದಿದ್ದು ಜೆಸಿಬಿ ಮುಖೇನ ತೆರವು ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. ಈ ಮಾರ್ಗದಲ್ಲಿ ಪ್ರಯಾಣ ಮಾಡುವವರಿದ್ದರೆ ಕೊಂಚ ಎಚ್ಚರಿಕೆ ವಹಿಸುವುದು ಒಳಿತು.

Bengaluru-Mangaluru train service suspended due to landslidesBengaluru-Mangaluru train service suspended due to landslides

Follow Us:
Download App:
  • android
  • ios