ಬೆಂಗಳೂರು (ಮೇ.05): ತಮಿಳುನಾಡಿನ ವೆಲ್ಲೂರಿನಲ್ಲಿ ಬೆಳಗಿನ ಜಾವ ನಡೆದ ಅಪಘಾತದಲ್ಲಿ ಬೆಂಗಳೂರಿನ ರೂಪದರ್ಶಿ ರೇಖಾ ಸಿಂಧು ಸಾವನಪ್ಪಿದ್ದಾರೆ. ಬೆಂಗಳೂರಿನ ಬಾಣಸವಾಡಿ ನಿವಾಸಿಯಾಗಿದ್ದ ರೇಖಾ ಸಿಂಧು ಜಾಹೀರಾತು ಚಿತ್ರೀಕರಣಕ್ಕೆ ಚೆನ್ನೈಗೆ ಹೋಗುತ್ತಿದ್ದ ವೇಳೆ ಅಪಘಾತ ನಡೆದಿದೆ.ಸಿಂಧು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ

