ಬೆಂಗಳೂರು(ಸೆ. 14): ಕಳೆದ ಎರಡು ದಿನಗಳಿಂದ ಕಾವೇರಿ ಕಿಚ್ಚಿಗೆ ಸಿಕ್ಕು ‘ಬೆಂದ’ಕಾಳೂರಾಗಿದ್ದ ನಗರ ಬುಧವಾರ ಶಾಂತಗೊಂಡಿದೆ. ಇಲ್ಲಿಯ ಜನಜೀವನ ಬಹುತೇಕ ಸಹಜಸ್ಥಿತಿಗೆ ಬಂದಿದೆ. ಬಹುತೇಕ ಅಂಗಡಿ-ಮುಂಗಟ್ಟುಗಳು, ಮಾರುಕಟ್ಟೆ ಬಾಗಿಲು ತೆರೆದಿವೆ. ಅನೇಕ ಕಡೆ ಶಾಲಾ ಕಾಲೇಜುಗಳು ಎಂದಿನಂತೆ ನಡೆಯುತ್ತಿವೆ. ಸಾರ್ವಜನಿಕ ಸಾರಿಗೆ ಚಾಲನೆಯಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ಎಲ್ಲಿಯೂ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ. 16 ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ಹಿಂಪಡೆಯಲು ಗೃಹ ಸಚಿವರು ಸೂಚಿಸಿದ್ದಾರೆ. ಆದರೆ, ಈ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯಾಗಿ ಶಾಲಾ-ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಇಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡದಂತೆ ನಿಷೇಧ ಹೇರಿರುವ ಕ್ರಮವನ್ನು ಮುಂದುವರಿಸಲಾಗಿದೆ.