ಎಸ್​ಸಿ, ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಿರುವ ಸುಪ್ರೀಂಕೋರ್ಟ್​ ಆದೇಶ ಖಂಡಿಸಿ  ಇಂದು ದಲಿತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದ್ದವು.  ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. 

ನವದೆಹಲಿ (ಏ. 02): ಎಸ್​ಸಿ, ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಿರುವ ಸುಪ್ರೀಂಕೋರ್ಟ್​ ಆದೇಶ ಖಂಡಿಸಿ ಇಂದು ದಲಿತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದ್ದವು. ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. 

ಮಧ್ಯಪ್ರದೇಶದ ಮೊರೆನಾದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಪ್ರತಿಭಟನೆಯ ಕಾವು ಹೆಚ್ಚಾಗಿದ್ದು ಗುಜರಾತ್, ಪಂಜಾಬ್, ಉತ್ತರ ಪ್ರದೇಶದಲ್ಲಿ 144 ಜಾರಿಗೊಳಿಸಲಾಗಿದೆ. 

ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ತಾನ, ಪಂಜಾಬ್ ಸೇರಿದಂತೆ 7 ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ, ಕಾರುರು ಸಿಕ್ಕಸಿಕ್ಕ ಕಡೆ ಬೆಂಕಿ ಹಚ್ಚಲಾಗಿದೆ. ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ರೂ ಪರಿಸ್ಥಿತಿ ಮಾತ್ರ ಹತೋಟಿಗೆ ಬಂದಿಲ್ಲ. ಬೀದಿಗಿಳಿದ ದಲಿತ ಸಂಘಟನೆಗಳು ಸುಪ್ರೀಂಕೋರ್ಟ್ ಆದೇಶ ವಾಪಸ್​ಗೆ ಪಟ್ಟು ಹಿಡಿದಿದ್ದಾರೆ.

ಎಸ್ಸಿ/ ಎಸ್ಟಿ ದೌರ್ಜನ್ಯ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದನ್ನು ತಡೆಗಟ್ಟಲು, ಆರೋಪಗಳು ಸುಳ್ಳಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವುದಕ್ಕಾಗಿ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಮಾ.20 ರಂದು ಆದೇಶ ನೀಡಿತ್ತು. ಈ ಆದೇಶವನ್ನು ದಲಿತ ಸಂಘಟನೆಗಳು ಪ್ರಶ್ನಿಸಿದ್ದು, ಭಾರತ್ ಬಂದ್ ಗೆ ಕರೆ ನೀಡಿವೆ.