ಸಂಸದ ಡಿ.ಕೆ.ಸುರೇಶ್ ಗೆ ಬಿಗ್ ರಿಲೀಫ್
ಸಂಸದ ಡಿ.ಕೆ.ಸುರೇಶ್ ಗೆ ಬಿಗ್ ರಿಲೀಫ್ ದೊರಕಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಸುರೇಶ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಮುಕ್ತಗೊಳಿಸಿದೆ.
ಬೆಂಗಳೂರು[ಜೂ.27] : ಭೂಮಿ ಒತ್ತುವರಿ ಮಾಡಿ ಗಣಿಗಾರಿಕೆ ಮಾಡಿದ ಪ್ರಕರಣದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರನ್ನು ಜನಪ್ರತಿನಿಧಗಳ ವಿಶೇಷ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಈ ಮೂಲಕ ಸುರೇಶ್ಗೆ ಬಿಗ್ ರಿಲೀಫ್ ಸಿಕ್ಕಿದೆ.
ಕನಕಪುರದ ಸಾತನೂರು ಬಳಿ ಅರಣ್ಯ ಭೂಮಿ ಒತ್ತುವರಿ ಮಾಡಿ ಗಣಿಗಾರಿಕೆ ಮಾಡಲಾಗಿದೆ ಎಂದು ಕನಕಪುರದ ವಿಭಾಗದ ಅರಣ್ಯ ಅಧಿಕಾರಿಗಳು ದೂರು ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪ ಮುಕ್ತಗೊಳಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.