ಕೋಲಾರದ ಮಾಲೂರು ಪಟ್ಟಣದಲ್ಲಿ ನಡೆದ ನವಮಧು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್​ ಮೇಲೆ ಟ್ವಿಸ್ಟ್ ಸಿಕ್ಕಿದೆ. ನವವಧು ನಾಪತ್ತೆಯಾಗಿದ್ದಾಳೆ ಅಂತ ಮದುವೆಗೆ ಬಂದವರೆಲ್ಲಾ ತಲೆಕೆಡಿಸಿಕೊಂಡಿದ್ದರೆ, ಅತ್ತ ವರನೂ ನಾಪತ್ತೆಯಾಗಿದ್ದಾನೆ.

ಕೋಲಾರ : ಕೋಲಾರದ ಮಾಲೂರು ಪಟ್ಟಣದಲ್ಲಿ ನಡೆದ ನವಮಧು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್​ ಮೇಲೆ ಟ್ವಿಸ್ಟ್ ಸಿಕ್ಕಿದೆ. ನವವಧು ನಾಪತ್ತೆಯಾಗಿದ್ದಾಳೆ ಅಂತ ಮದುವೆಗೆ ಬಂದವರೆಲ್ಲಾ ತಲೆಕೆಡಿಸಿಕೊಂಡಿದ್ದರೆ, ಅತ್ತ ವರನೂ ನಾಪತ್ತೆಯಾಗಿದ್ದಾನೆ. ಬಂಗಾರಪೇಟೆ ತಾಲೂಕಿನ ನರ್ನಹಳ್ಳಿಯ ಸೌಮ್ಯ ಹಾಗೂ ಗುರೇಶ್​ ಮದುವೆ ಇವತ್ತು ನಡೆಯಬೇಕಿದ್ದು ನಿನ್ನೆ ಆರತಕ್ಷತೆ ಕೂಡಾ ನಡೆದಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಆದರೆ ಬೆಳ್ಳಂಬೆಳಗ್ಗೆ ವಧು ಸೌಮ್ಯ ನಾಪತ್ತೆಯಾಗಿದ್ದಳು. ಪದ್ಮಾವತಿ ಕಲ್ಯಾಣ ಮಂಟಪಕ್ಕೆ ಬರಬೇಕಿದ್ದ ವಧು ಸೌಮ್ಯ ಮನೆಯಿಂದ ಕಾಣೆಯಾಗಿದ್ದಳು. ಹೀಗಾಗಿ ಮನೆಯವರೆಲ್ಲಾ ಸೇರಿ, ಸೌಮ್ಯಳ ತಂಗಿ ವೆಂಕಟ ರತ್ನಮ್ಮಳನ್ನು ಗುರೇಶ್​ಗೆ ಕೊಟ್ಟು ಮದುವೆ ಮಾಡಲು ನಿರ್ಧರಿಸಿದ್ದರು.

ಬೆಳಗ್ಗೆ ಅರಶಿಣಶಾಸ್ತ್ರ ಕೂಡಾ ನಡೆದಿತ್ತು. ಆದರೆ ವರ ಗುರೇಶ್​ಗೆ ಮಾತ್ರ ವೆಂಕಟ ರತ್ನಮ್ಮಳನ್ನು ಮದುವೆ ಆಗೋದು ಇಷ್ಟ ಇರಲಿಲ್ಲ. ಹೀಗಾಗಿ ಮೊಬೈಲ್​ ಸ್ವಿಚ್​ ಆಫ್​ ಮಾಡಿಕೊಂಡು ಮದುವೆ ಮಂಠಪದಿಂದ ಎಸ್ಕೇಪ್​ ಆಗಿದ್ದಾನೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.