500, 1000 ರೂಪಾಯಿ ನೋಟ್ ಬ್ಯಾನ್: ಪ್ರಧಾನಿ ಮೋದಿಯನ್ನು ಬೆಂಬಲಿಸಿದ ಬಿಹಾರ್ ಸಿಎಂ
ಜೆಡಿಯು ಮುಖಂಡ ಹಾಗೂ ಬಿಹಾರ್ ಸಿಎಂ ನಿತೀಶ್ ಕುಮಾರ್ ಮಾತ್ರ ಪ್ರಧಾನಿ ಮೋದಿಗೆ ಬೆಂಬಲ ಸೂಚಿಸಿದ್ದಾರೆ. ಇವತ್ತು ಪಕ್ಷದ ಸಭೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ನಿತೀಶ್ಕುಮಾರ್ ಪ್ರಧಾನಿ ನೋಟ್ಬ್ಯಾನ್ ಮಾಡಿದ್ದರಿಂದ ಕಪ್ಪು ಹಣ ತಡೆಯಲು ಸಾಧ್ಯವಾಗುತ್ತದೆ, ಹಾಗಾಗಿ ನಾಳೆ ನಡೆಯುವ ಬಂದ್ಗೆ ನನ್ನ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಿಹಾರ(ನ.27): 500, 1000 ರೂಪಾಯಿ ನೋಟ್ ಬ್ಯಾನ್ ಮಾಡಿರುವುದು ಖಂಡಿಸಿ ನಾಳೆ ವಿಪಕ್ಷಗಳು ಭಾರತ್ ಬಂದ್ಗೆ ಕರೆ ನೀಡಿವೆ. ಬಂದ್ನಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ವಿಪಕ್ಷ ನಾಯಕರು ಬಂದ್ಗೆ ಬೆಂಬಲ ಸೂಚಿಸಿದ್ದಾರೆ.
ಆದರೆ ಜೆಡಿಯು ಮುಖಂಡ ಹಾಗೂ ಬಿಹಾರ್ ಸಿಎಂ ನಿತೀಶ್ ಕುಮಾರ್ ಮಾತ್ರ ಪ್ರಧಾನಿ ಮೋದಿಗೆ ಬೆಂಬಲ ಸೂಚಿಸಿದ್ದಾರೆ. ಇವತ್ತು ಪಕ್ಷದ ಸಭೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ನಿತೀಶ್ಕುಮಾರ್ ಪ್ರಧಾನಿ ನೋಟ್ಬ್ಯಾನ್ ಮಾಡಿದ್ದರಿಂದ ಕಪ್ಪು ಹಣ ತಡೆಯಲು ಸಾಧ್ಯವಾಗುತ್ತದೆ, ಹಾಗಾಗಿ ನಾಳೆ ನಡೆಯುವ ಬಂದ್ಗೆ ನನ್ನ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.